Advertisement
ಈ ಕುರಿತಂತೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ರಾಜ್ಯ ಸರ್ಕಾರಕ್ಕೆ ಈ ನಿರ್ದೇಶನ ನೀಡಿ ವಿಚಾರಣೆಯನ್ನು ಜೂ.3ಕ್ಕೆ ಮುಂದೂಡಿತು.
Related Articles
Advertisement
ಆನಂತರ ನ್ಯಾಯಾಲಯ ನೀಡುವ ನಿರ್ದೇಶನಗಳನ್ನು ಪಾಲಿಸಲಾಗುವುದು. ಅದಕ್ಕಾಗಿ ಸ್ವಲ್ಪ ಕಾಲಾವಕಾಶ ಬೇಕು ಎಂದು ನ್ಯಾಯಪೀಠವನ್ನು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ವಿಚಾರಣೆಯನ್ನು ಜೂ.3ಕ್ಕೆ ಮುಂದೂಡಿತು. ಅರ್ಜಿದಾರರ ಪರ ವಕೀಲ ಕ್ಲಿಫ್ಟನ್ ಡಿ. ರೊಜಾರಿಯೊ ವಾದ ಮಂಡಿಸಿದರು.
ಕಳೆದ ವರ್ಷ 28 ಸಾವಿರ ಪ್ರಕರಣಗಳು: ಸರಕು ವಾಹನಗಳಲ್ಲಿ ಜನರನ್ನು ಸಾಗಿಸುತ್ತಿದ್ದವರ ವಿರುದ್ಧ ಸಂಚಾರ ಪೊಲೀಸರು ಕಳೆದ ವರ್ಷ 28 ಸಾವಿರ ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ವರ್ಷ 986 ಜನರ ವಿರುದ್ಧ ಕೇಸು ದಾಖಲು ಮಾಡಲಾಗಿದೆ.
ನಗರದ ಪೊಲೀಸರು ಶಾಲಾ ಮಕ್ಕಳ ಸುರಕ್ಷಿತ ಪ್ರಯಾಣಕ್ಕೆ ಒತ್ತು ನೀಡುತ್ತಿದ್ದಾರೆ. ಅದಕ್ಕಾಗಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಎಡಿಜಿಪಿ ನ್ಯಾಯಪೀಠಕ್ಕೆ ವಿವರಿಸಿದರು. ಇದೇ ವೇಳೆ ಕಾರ್ಮಿಕ ಆಯುಕ್ತರು ಹಾಗೂ ಸಾರಿಗೆ ಆಯುಕ್ತರು ಸಹ ಆಯಾ ಇಲಾಖೆಗಳು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.