ಯಾದಗಿರಿ: ಜಿಲ್ಲೆಯಲ್ಲಿ ನಿರ್ಮಾಣಗೊಂಡಿರುವ ಕೈಗಾರಿಕಾ ಪ್ರದೇಶಕ್ಕೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲಾಗಿದ್ದು, ಉದ್ಯಮಿಗಳು ಶೀಘ್ರವಾಗಿ ಚಟುವಟಿಕೆ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿ ಕಾರಿ ಡಾ| ರಾಗಪ್ರಿಯಾ.ಆರ್ ಅಧಿ ಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಕಡೇಚೂರ ಕೈಗಾರಿಕಾ ಪ್ರದೇಶದಲ್ಲಿರುವ ನಿವೇಶನ ಪಡೆದ ಕೈಗಾರಿಕೋದ್ಯಮಿಗಳ ಸಮಸ್ಯೆಗಳ ಆಲಿಸಿ ಮಾತನಾಡಿದರು. ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ಚಟುವಟಿಕೆಗಳು ಆರಂಭವಾದಲ್ಲೀ ಜಿಲ್ಲೆಯ ಜನರಿಗೆ ಉದ್ಯೋಗ ದೊರೆಯಲಿದೆ, ಉದ್ಯಮಿಗಳಿಗೆ ಸಮಸ್ಯೆ ಗಳಿದ್ದಲ್ಲಿ ಅವುಗಳನ್ನು ಬಗೆಹರಿಸಿಕೊಳ್ಳಲು ಜಿಲ್ಲಾ ಕೈಗಾರಿಕಾ ಕೇಂದ್ರದವರು ನೆರವು ನೀಡಬೇಕು, ಒಟ್ಟಾರೆ ಜಿಲ್ಲೆಯಲ್ಲಿ ಕೈಗಾರಿಕಾ ಚಟುವಟಿಕೆಗಳು ಆರಂಭವಾಗಬೇಕು ಎಂದು ಹೇಳಿದರು.
ಕೈಗಾರಿಕೆ ಆರಂಭಿಸಲು ಆಸಕ್ತರಿರುವವರಿಗೆ ಇಲಾಖೆ ವತಿಯಿಂದ ನೆರವು ನೀಡಬೇಕು. ನೂತನ ಕೈಗಾರಿಕಾ ನೀತಿ ನಿಯಮ ಹಾಗೂ ಪ್ರಕ್ರಿಯೆ ತಿಳಿಸಿಕೊಡಬೇಕು. ಎರಡೂ¾ರು ತಿಂಗಳಲ್ಲಿ ಅವರು ಕೈಗಾರಿಕೆ ಆರಂಭಿಸುವ ವಾತಾವರಣ ಸೃಷ್ಟಿಯಾಗಬೇಕು ಎಂದರು.
ಕಡೇಚೂರ ಕೈಗಾರಿಕಾ ಪ್ರದೇಶದಲ್ಲಿ ಈಗಾಗಲೇ 116 ಯುನಿಟ್ ಗಳಿದ್ದು, ಇದರಲ್ಲಿ 62 ಯುನಿಟ್ ಗಳಿಗೆ ಪ್ರಾರಂಭಿಸಲು ಅನುಮತಿ ನೀಡಲಾಗಿದೆ. ಪ್ರಸ್ತುತ 2 ಯುನಿಟ್ ಕಾರ್ಯನಿರ್ವಹಿಸುತ್ತಿವೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮಾಣಿಕ್ ರಘೋಜಿ ತಿಳಿಸಿದರು.
ಸಭೆಯಲ್ಲಿ ಕೆಐಎಡಿಬಿ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಸುಭಾಷ ನಾಯಕ, ಸಹಾಯಕ ನಿರ್ದೇಶಕಿ ರೇಖಾ ಮ್ಯಾಗೇರಿ, ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಉಪ ಪರಿಸರ ಅಧಿ ಕಾರಿ ಎಸ್. ವೆಂಕಟೇಶ ಸೇರಿದಂತೆ ಕೈಗಾರಿಕೋದ್ಯಮಿಗಳು ಇದ್ದರು.