Advertisement

ದಕ್ಷಿಣಕನ್ನಡದಲ್ಲಿ ಖಾಸಗಿ ಮತ್ತು ಸಿಟಿ ಬಸ್ ಗಳ ಓಡಾಟ ಆರಂಭ

10:18 AM Jul 01, 2021 | Team Udayavani |

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಖಾಸಗಿ ಮತ್ತು ಸಿಟಿ ಬಸ್ ಗಳ ಓಡಾಟ ಆರಂಭಗೊಂಡಿದೆ.

Advertisement

ಕೋವಿಡ್ ಲಾಕ್ ಡೌನ್ ಕಾರಣದಿಂದ ಸುಮಾರು 2 ತಿಂಗಳ ಸ್ಥಗಿತಗೊಂಡಿದ್ದ ಬಸ್ ಸೇವೆ ಇಂದಿನಿಂದ ಆರಂಭಗೊಂಡಿದೆ. ಮೊದಲ ಹಂತದಲ್ಲಿ ಸೀಮಿತ ಸಂಖ್ಯೆಯ ಬಸ್ ಗಳು ರಸ್ತೆಗಿಳಿದಿದ್ದು, ಬಹುತೇಕ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು.

ಸಿಟಿ ಬಸ್ ಗಳು ಹ್ಯಾಮಿಲ್ಟನ್ ವೃತ್ತದಿಂದ ರಾವ್ ಆ್ಯಂಡ್ ರಾವ್ ವೃತ್ತ ರಸ್ತೆಯಲ್ಲಿ ನಿಲ್ಲದೆ ಸರ್ವೀಸ್ ಬಸ್ ನಿಲ್ದಾಣವಾಗಿ ಪ್ರವೇಶ ಪಡೆದಿತ್ತು. ಸ್ಥಳದಲ್ಲಿ ಯಾವುದೇ ಗೊಂದಲ ಉಂಟಾಗಬಾರದು ಎಂದು ಬಸ್ ನಿಲ್ದಾಣದಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು‌.

ಇದನ್ನೂ ಓದಿ:  ಪೆಟ್ರೋಲ್, ಡೀಸೆಲ್ ಆಯ್ತು…ಈಗ ಎಲ್ ಪಿಜಿ ಸಿಲಿಂಡರ್ ಬೆಲೆ 25.50 ರೂಪಾಯಿ ಹೆಚ್ಚಳ!

Advertisement

Udayavani is now on Telegram. Click here to join our channel and stay updated with the latest news.

Next