Advertisement

ವಾಣಿಜ್ಯ ಜಾಹೀರಾತಿಗೆ ಅವಕಾಶ ಇಲ್ಲ

01:00 AM Feb 04, 2019 | |

ಬೆಂಗಳೂರು: ಸರ್ಕಾರಿ ಶಾಲೆಗಳ ಕಟ್ಟಡ ಮತ್ತು ಖಾಲಿ ಜಾಗ ದಲ್ಲಿ ವಾಣಿಜ್ಯ ಜಾಹೀರಾತು ಫ‌ಲಕಕ್ಕೆ ಅವಕಾಶ ನೀಡಬಾರ ದೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲ ಜಿಲ್ಲಾ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆದೇಶ ಹೊರಡಿಸಿದೆ.

Advertisement

ಶಿಕ್ಷಣ ಇಲಾಖೆಯ ಖಾಲಿ ಜಾಗ ಅಥವಾ ಸರ್ಕಾರಿ ಶಾಲಾ ಕಟ್ಟಡದಲ್ಲಿ ವಾಣಿಜ್ಯ ಜಾಹೀರಾತು ಫ‌ಲಕಗಳನ್ನು ಅಳವಡಿಸುವುದು ಸರ್ಕಾರದ ನೀತಿಗೆ ವಿರುದ್ಧ ವಾಗಿದೆ. ಹೀಗಾಗಿ ಯಾವುದೇ ಸರ್ಕಾರಿ ಶಾಲೆಗಳ ಆವರಣ ಹಾಗೂ ಕಟ್ಟಡಗಳಲ್ಲಿ ವಾಣಿಜ್ಯ ಜಾಹೀರಾತು ಫ‌ಲಕಗಳನ್ನು ಅಳವಡಿಸಲು ಅವಕಾಶ ನೀಡಬಾರದು. ಈ ಸಂಬಂಧ ಯಾವುದೇ ಪ್ರಸ್ತಾವನೆ ಬಂದರೂ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ಹಂತದಲ್ಲೇ ಅರ್ಜಿದಾರರಿಗೆ ಹಿಂಬರಹ ನೀಡಿ, ಕಳುಹಿಸಬೇಕು ಎಂದು ನಿರ್ದೇಶಿಸಿದೆ. ಬೆಂಗಳೂರು ನಗರದಲ್ಲಿ ಜಾಹೀರಾತು ಫ‌ಲಕ ತೆರವಿಗೆ ನ್ಯಾಯಾಲಯ ಆದೇಶ ನೀಡಿದ ನಂತರ ಸಾರ್ವಜನಿಕ ಶಿಕ್ಷಣ ಇಲಾಖೆಯೂ ಎಚ್ಚೆತ್ತುಕೊಂಡಿದೆ. ಖಾಸಗಿ ಸಂಸ್ಥೆಯೊಂದು ಇತ್ತೀಚೆಗೆ ವಾಣಿಜ್ಯ ಜಾಹೀರಾತಿಗೆ ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಿತ್ತು. ಇಲಾಖೆ ಈ ಪ್ರಸ್ತಾವನೆಯನ್ನು ತಿರಸ್ಕರಿಸಿ, ಎಲ್ಲ ಡಿಡಿಪಿಐ ಮತ್ತು ಬಿಇಒಗಳಿಗೆ ನಿರ್ದೇಶನ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next