Advertisement
ನಗರದಲ್ಲಿ ಎರಡು ತಿಂಗಳು ಸುರಿದ ಭಾರಿ ಮಳೆಯಿಂದಾಗಿ ಹಲವಾರು ಭಾಗಗಳಲ್ಲಿನ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಜನರು ತೊಂದರೆ ಅನುಭವಿಸಿದ್ದರು. ಆ ಹಿನ್ನೆಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು, ಮನೆಗಳಿಗೆ ನೀರು ನುಗ್ಗಿ ತೊಂದರೆಗೊಳಗಾದ ಕುಟುಂಬಗಳನ್ನು ಗುರುತಿಸಿ ಪರಿಹಾರ ನೀಡುವಂತೆ ಸೂಚಿಸಿದ್ದರು.
Related Articles
Advertisement
ಅದೇ ರೀತಿ ಜ್ಞಾನಭಾರತಿ ವಾರ್ಡ್ನಲ್ಲಿ 129 ಮಂದಿಗೆ ಸಂತ್ರಸ್ತರಿಗೆ ಪರಿಹಾರ ನೀಡಲು ನಿರ್ಧರಿಸಿದ್ದು, 84 ಮಂದಿಗೆ 4.36 ಲಕ್ಷ ರೂ. ಮೊತ್ತದ ಪಾವತಿ ಬಾಕಿಯಿದೆ ಎಂದು ರಾಜರಾಜೇಶ್ವರಿನಗರ ವಲಯದ ಜಂಟಿ ಆಯುಕ್ತರು ಹೇಳಿದ್ದಾರೆ. ಆ ಮೂಲಕ ರಾಜರಾಜೇಶ್ವರಿನಗರ ಕ್ಷೇತ್ರ ಒಂದರಲ್ಲೇ 2.30 ಕೋಟಿಯಷ್ಟು ಹಣವನ್ನು ಮಳೆ ಪರಿಹಾರವಾಗಿ ನೀಡಲಾಗಿದ್ದು, ಮಹಾಲಕ್ಷ್ಮೀ ಬಡಾವಣೆಯಲ್ಲಿಯೂ ಇದೇ ರೀತಿ ಪರಿಹಾರ ನೀಡಲಾಗಿದೆ ಎಂದು ತಿಳಿದುಬಂದಿದೆ.
ಮನೆಗಳಿಗೆ ನೀರು ನುಗ್ಗಿ ತೊಂದರೆ ಅನುಭವಿಸಿದ ಕುಟುಂಬಗಳನ್ನು ಗುರುತಿಸುವ ಜವಾಬ್ದಾರಿಯನ್ನು ಕಂದಾಯ ವಿಭಾಗದ ಅಧಿಕಾರಿಗಳಿಗೆ ನೀಡಲಾಗಿತ್ತು. ಈ ವೇಳೆ ಅರ್ಹರಲ್ಲದವರನ್ನೂ ಸಂತ್ರಸ್ತರ ಪಟ್ಟಿಗೆ ಸೇರಿಸಿ ಪರಿಹಾರ ನೀಡುವ ಬಗ್ಗೆ ತಿಳಿದು ಬಂದಿದ್ದು, ತನಿಖೆ ನಡೆಸಲು ವಿಶೇಷ ಆಯುಕ್ತರಿಗೆ ಆದೇಶಿಸಲಾಗಿದೆ.-ಎನ್.ಮಂಜುನಾಥ ಪ್ರಸಾದ್, ಬಿಬಿಎಂಪಿ ಆಯುಕ್ತ ಮೃತರ ಕುಟುಂಬಕ್ಕೆ ಪರಿಹಾರ ನೀಡದ ಬಿಬಿಎಂಪಿ
ಬೆಂಗಳೂರು: ಮರ ಉರುಳಿ ಬಿದ್ದು ಬೈಕ್ ಸವಾರ ಫೈರೋಜ್ ಪಾಷಾ ಎಂಬುವರು ಮೃತಪಟ್ಟು ಒಂದೂವರೆ ವರ್ಷ ಕಳೆದರೂ ಮೃತರ ಕುಟುಂಬಕ್ಕೆ ಬಿಬಿಎಂಪಿಯಿಂದ ಪರಿಹಾರ ಸಿಕ್ಕಿಲ್ಲ. ಕಳೆದ ವರ್ಷ ಮಲ್ಲೇಶ್ವರದ 18ನೇ ಅಡ್ಡರಸ್ತೆಯಲ್ಲಿ ಜೋರಾಗಿ ಬೀಸಿದ ಗಾಳಿಗೆ ಮರ ಉರುಳಿ ರಸ್ತೆಯಲ್ಲಿ ಚಲಿಸುತ್ತಿದ್ದ ಪೈರೋಜ್ ಪಾಷಾ ಎಂಬುವರು ಮೃತಪಟ್ಟಿದ್ದರು. ಆ ಹಿನ್ನೆಲೆಯಲ್ಲಿ ಮೃತರ ಕುಟುಂಬಕ್ಕೆ ಪಾಲಿಕೆಯಿಂದ ಒಂದು ಲಕ್ಷ ಪರಿಹಾರ ನೀಡುವುದಾಗಿ ಬಿಬಿಎಂಪಿ ಆಯುಕ್ತರ ಘೋಷಿಸಿ ಒಂದೂವರೆ ವರ್ಷ ಕಳೆದರೂ ಈವರೆಗೆ ಮೃತರ ಕುಟುಂಬಕ್ಕೆ ಪರಿಹಾರ ದೊರೆತಿಲ್ಲ. ಪರಿಹಾರಕ್ಕಾಗಿ ಸುಮಾರು 50ಕ್ಕೂ ಹೆಚ್ಚು ಬಾರಿ ಪಾಲಿಕೆಗೆ ಬಂದು ಅಧಿಕಾರಿಗಳನ್ನು ಭೇಟಿ ಮಾಡಿದರೂ ಪರಿಹಾರ ಸಿಗಲಿಲ್ಲ ಎಂದು ಫೈರೋಜ್ ಪಾಷಾ ಕುಟುಂಬ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.