Advertisement

ಆಹಾರ ಭದ್ರತೆಗೆ ಬದ್ಧ; 5 ಕೆ.ಜಿ. ಆಹಾರಧಾನ್ಯಗಳ ಜತೆಗೆ ಹೆಚ್ಚುವರಿ ಒಂದು ಕೆ.ಜಿ ಅಕ್ಕಿ

09:22 PM Feb 17, 2023 | Team Udayavani |

ಸರ್ಕಾರವು ನಾಡಿನ ಪ್ರತಿಯೊಬ್ಬ ನಾಗರಿಕನಿಗೂ ಆಹಾರ ಭದ್ರತೆ ನೀಡಲು ಬದ್ಧವಾಗಿದೆ ಎಂದು ಪ್ರತಿಪಾದಿಸಿರುವ ಮುಖ್ಯಮಂತ್ರಿಯವರು, ಕೇಂದ್ರ ಸರ್ಕಾರದ “ಆಹಾರ ಭದ್ರತಾ ಕಾಯ್ದೆ’ಯಡಿ ಪ್ರತಿ ಫ‌ಲಾನುಭವಿಗೆ ನೀಡಲಾಗುತ್ತಿರುವ 5 ಕೆ.ಜಿ. ಆಹಾರಧಾನ್ಯಗಳ ಜೊತೆಯಲ್ಲಿ ಒಂದು ಕೆ.ಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ನೀಡುವುದಾಗಿ ತಿಳಿಸಿದ್ದಾರೆ.

Advertisement

ಇದಕ್ಕಾಗಿ 2023-24ನೇ ವರ್ಷದಲ್ಲಿ 4 ಸಾವಿರ ಕೋಟಿ ಅನುದಾನ ಒದಗಿಸುವುದಾಗಿಯೂ ಘೋಷಿಸಿದ್ದಾರೆ. ಕೋವಿಡ್‌ ಸಾಂಕ್ರಾಮಿಕದ ಸಂದರ್ಭದಲ್ಲಿ ಯಾರೂ ಹಸಿವಿನಿಂದ ಬಳಲದಂತೆ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ್‌ ಅನ್ನ ಯೋಜನೆಯಡಿ ಕೇಂದ್ರ ಸರ್ಕಾರ ಹೆಚ್ಚುವರಿ ಆಹಾರಧಾನ್ಯ ವಿತರಿಸಿತ್ತು.

ಇದರೊಂದಿಗೆ ರಾಜ್ಯ ಸರ್ಕಾರವು ಅಕ್ಕಿಯೊಂದಿಗೆ ಸ್ಥಳೀಯ ಪ್ರಮುಖ ಆಹಾರಧಾನ್ಯಗಳಾದ ರಾಗಿ ಮತ್ತು ಜೋಳವನ್ನೂ ಸಹ ಪಡಿತರ ವ್ಯವಸ್ಥೆಯಡಿ ವಿತರಿಸಿ ರಾಜ್ಯದ ರೈತರಿಗೆ ಹೆಚ್ಚುವರಿ ನೀಡಿದೆ. ಸ್ಥಳೀಯ ಧಾನ್ಯಗಳ ವಿತರಣೆಯನ್ನು ಈ ವರ್ಷವೂ ಮುಂದುವರಿಸಲಾಗುವುದು ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next