Advertisement

ಅರಣ್ಯವಾಸಿಗಳಿಗೆ ಮೂಲ ಸೌಲಭ್ಯ ಕೊಡಲು ಬದ್ಧ

08:36 AM Jan 01, 2018 | |

ಮಾಗಡಿ: ಅರಣ್ಯದಲ್ಲಿ ವಾಸಿಸುತ್ತಿರುವ ಆದಿವಾಸಿಗಳು ಹಾಗೂ ಬುಡಕಟ್ಟು ಜನಾಂಗದವರಿಗೆ ಪೌಷ್ಠಿಕ ಆಹಾರ ಹಾಗೂ ಸಾಮಾಜಿಕ ನ್ಯಾಯದಡಿ ಮೂಲ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ
ಹೆಚ್.ಆಂಜನೇಯ ತಿಳಿಸಿದರು. 

Advertisement

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಜೇನುಕಲ್ಲು ಪಾಳ್ಯದ ಇರುಳಿ ಗರ ಕಾಲೋನಿ ಯಲ್ಲಿ ಭಾನುವಾರ ರಾತ್ರಿ ವಾಸ್ತವ್ಯ ಹೂಡಿದ ಸಚಿವರು, ನಿವಾಸಿಗಳ ಜತೆಗೆ ನೂತನ ವರ್ಷದ  ಆಚರಣೆಯಲ್ಲಿ ಪಾಲ್ಗೊಂಡರು. ಈ ವೇಳೆ ಮಾತನಾಡಿ, “ಅರಣ್ಯವಾಸಿಗಳ ಕಾಲೋನಿಗಳಲ್ಲಿ ಇಲ್ಲಿಯವರೆಗೂ ಯಾವೊಬ್ಬ ಸಚಿವರಾಗಲಿ, ಶಾಸಕರಾಗಲಿ ವಾಸ್ತವ್ಯ ಹೂಡಿರಲಿಲ್ಲ. ನಾನು ಇಲ್ಲಿನ ಜೇನುಕಲ್ಲು ಪಾಳ್ಯದ ಇರುಳಿಗರ ಕಾಲೋನಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಸಮಗ್ರವಾಗಿ ಆಲಿಸಿದ್ದೇನೆ. ಆದಷ್ಟು ಎಲ್ಲಾ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕೊಡಿಸುತ್ತೇನೆ’ ಎಂದು ಭರವಸೆ ನೀಡಿದರು. 

Advertisement

Udayavani is now on Telegram. Click here to join our channel and stay updated with the latest news.

Next