Advertisement

ಮಹದಾಯಿ ಅನುಷ್ಠಾನಕ್ಕೆ ಬದ್ಧ

10:53 PM Feb 29, 2020 | Lakshmi GovindaRaj |

ಹುಬ್ಬಳ್ಳಿ: ಮಹದಾಯಿ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಅದಕ್ಕೆ ಅಗತ್ಯವಿರುವ ಅನುದಾನವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಬಜೆಟ್‌ನಲ್ಲಿ ಮೀಸಲಿಡಲಿದ್ದಾರೆ ಎಂದು ಗೃಹಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶನಿವಾರ “ಉದಯವಾಣಿ’ ಜತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿದ್ದು, ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಪರವಾನಗಿ ಹಾಗೂ ಕೇಂದ್ರ ಜಲ ಆಯೋಗ (ಸಿಡಬುಸಿ)ದ ಅನುಮೋದನೆ ಪಡೆಯಬೇಕು.

Advertisement

ಪರಿಷ್ಕೃತ ಡಿಪಿಆರ್‌ ಆಗಬೇಕು. ಈಗಾಗಲೇ ಯಡಿಯೂರಪ್ಪನವರು ಕಾಮಗಾರಿಯ ಅನುಷ್ಠಾನಕ್ಕಾಗಿ ಅಗತ್ಯ ಹಣ ಮೀಸಲಿಡುವುದಾಗಿ ಹೇಳಿದ್ದಾರೆ. ಯೋಜನೆಯ ಕಾಮಗಾರಿಗೆ ಈಗಲೇ ಇಂತಿಷ್ಟೇ ಹಣ ಬೇಕಾಗುತ್ತದೆ ಎಂದು ಹೇಳುವುದು ಕಷ್ಟ. ತಾಂತ್ರಿಕ ಅಂದಾಜು ವೆಚ್ಚ ಮತ್ತು ಪರಿಷ್ಕೃತ ಡಿಪಿಆರ್‌ ಮೇಲೆ ಅದು ಅವಲಂಬಿತವಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next