Advertisement

ಎನ್‌ಟಿಎ ಸುಧಾರಣೆಗೆ ಸಮಿತಿ ರಚನೆ?

11:41 PM Jun 18, 2024 | Team Udayavani |

ಹೊಸದಿಲ್ಲಿ: ನೀಟ್‌-ಯುಜಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಆರೋಪ ಬಂದಿರುವ ಹಿನ್ನೆಲೆಯಲ್ಲಿ  ಪರೀಕ್ಷೆ ನಡೆಸುವ ಹೊಣೆ ಹೊತ್ತಿರುವ ಎನ್‌ಟಿಎ (ರಾಷ್ಟ್ರೀಯ ಪರೀಕ್ಷಾ ಸಂಸ್ಥೆ)ನಲ್ಲಿ ಸುಧಾರಣೆ ಮಾಡಲು ಕೇಂದ್ರ ಸರಕಾರ ಮುಂದಾಗಿದೆ ಎಂದು ವರದಿಯಾಗಿದೆ. ಈ ಸುಧಾರಣೆಗಾಗಿ ಉನ್ನತಮಟ್ಟದ ಸಮಿತಿ ರಚನೆ ಯಾಗುವ ಸಾಧ್ಯತೆಯಿದೆ. ನೀಟ್‌ ವಿಚಾರದಲ್ಲಿ ಕೂಡ ಕೆಲವೊಂದು ಸುಧಾರಣೆಗಳನ್ನು ತರಲು ಕೇಂದ್ರ ಮುಂದಾಗಿದೆ ಎಂದು ಹೇಳಲಾಗಿದೆ. ಇದೇ ವೇಳೆ, ನೀಟ್‌-ಯುಜಿ ಪರೀಕ್ಷೆಯಲ್ಲಿ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಿ ತೆಲಂಗಾಣದ ರಾಜ್ಯದಲ್ಲಿ ವಿವಿಧೆಡೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ದೇಶಾದ್ಯಂತ ಈ ವಿಚಾರವಾಗಿ ಬಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

Advertisement

ಪ್ರಧಾನಿ ಮೌನವೇಕೆ?: ರಾಹುಲ್‌ ಗಾಂಧಿ ಪ್ರಶ್ನೆ

ಬಿಜೆಪಿ ಆಡಳಿತದ ರಾಜ್ಯಗಳಲ್ಲೇ ನೀಟ್‌ ಅಕ್ರಮ ವರದಿಯಾಗುತ್ತಿದ್ದು, ಈ ರಾಜ್ಯಗಳು ಪತ್ರಿಕೆ ಸೋರಿಕೆ ಯ ಕೇಂದ್ರಗಳಾಗಿವೆ ಎಂದು ಸಂಸದ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಟ್ವೀಟ್‌ ಮಾಡಿ, “ಬಿಹಾರ, ಗುಜರಾತ್‌, ಹರಿಯಾಣದಲ್ಲಿ ನಡೆದ ಬಂಧನಗಳು ನೀಟ್‌ನಲ್ಲಿ ಸಂಘಟಿತ ಅಕ್ರಮ ನಡೆದಿದೆ ಎಂದು ಸ್ಪಷ್ಟಪಡಿಸುತ್ತವೆ. 24 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದ್ದರೂ ಮೋದಿ ಮೌನವಾಗಿದ್ದಾರೆ. ಈ ಬಗ್ಗೆ ಸಂಸತ್ತಿನಲ್ಲಿ ನಾವು ಪ್ರಸ್ತಾವಿಸಿ ಕಠಿನ ಕಾನೂನು ರೂಪಿಸುತ್ತೇವೆ’ ಎಂದಿದ್ದಾರೆ.

ವಿದ್ಯಾರ್ಥಿಗಳಿಗೆ 30 ಲಕ್ಷ ಆಮಿಷ: ಪೊಲೀಸರು

ಪಟ್ನಾ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಲವು ವಿದ್ಯಾರ್ಥಿಗಳಿಗೆ 30 ಲಕ್ಷ ರೂ. ನೀಡಿದರೆ ಪ್ರಶ್ನೆ ಪತ್ರಿಕೆ ನೀಡುವ ಆಫ‌ರ್‌ ನೀಡಲಾಗಿತ್ತು ಎಂದು ಬಿಹಾರ ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ ಅಕ್ರಮಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳು ಪರೀಕ್ಷೆಗೂ ಮುನ್ನ ಪ್ರಶ್ನೆಪತ್ರಿಕೆ ಪಡೆದುಕೊಂಡಿದ್ದು ಒಬ್ಬ ವಿದ್ಯಾರ್ಥಿ ಈ ಬಗ್ಗೆ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ.  ಆಯುಷ್‌ ರಾಜ್‌, ಅಭಿಷೇಕ್‌ ಕುಮಾರ್‌ ಹಾಗೂ ಶಿವನಂದನ್‌ ಕುಮಾರ್‌ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಪಡೆದುಕೊಂಡಿದ್ದರು ಎಂದು ವರದಿಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next