Advertisement

ಮೀಸಲಾತಿ ಪರಿಶೀಲನೆಗೆ ಸಮಿತಿ : ಬೀಸೋ ದೊಣ್ಣೆಯಿಂದ ತಪ್ಪಿಸಲು ಮಾರ್ಗ

12:32 AM Mar 04, 2021 | Team Udayavani |

ಬೆಂಗಳೂರು: ವಿವಿಧ ಸಮುದಾಯಗಳಿಂದ ಮೀಸಲಾತಿ ಬೇಡಿಕೆ ಸಂಕಷ್ಟದಿಂದ ಪಾರಾಗಲು ರಾಜ್ಯ ಸರಕಾರ ಉನ್ನತ ಮಟ್ಟದ ಸಮಿತಿ ರಚನೆಯ ಮಾರ್ಗ ಕಂಡುಕೊಂಡಿದೆ.

Advertisement

ಪಂಚಮಸಾಲಿ, ಕುರುಬ, ವಾಲ್ಮೀಕಿ ಸೇರಿದಂತೆ ಪ್ರಮುಖ ಸಮುದಾಯಗಳು ಮೀಸಲಾತಿಗಾಗಿ ಒತ್ತಡ ಹೇರುತ್ತಿರುವುದರಿಂದ ರಾಜ್ಯ ಸರಕಾರ ಇಕ್ಕಟ್ಟಿನಲ್ಲಿ ಸಿಲುಕಿಕೊಂಡಿದೆ. ಪಕ್ಷದ ವರಿಷ್ಠರು ಕೂಡ ಮೀಸಲಾತಿ ಪ್ರಸ್ತಾವವನ್ನು ಕೇಂದ್ರಕ್ಕೆ ತರದಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ತಂತ್ರ ಅನುಸರಿಸಿದೆ ಎನ್ನಲಾಗಿದೆ.

ಮೀಸಲಾತಿ ಬೇಡಿಕೆಯ ಬಗ್ಗೆ ಪರಾಮರ್ಶಿಸಿ ವರದಿ ನೀಡಲು ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಮೂವರು ಸದಸ್ಯರ ಸಮಿತಿ ರಚನೆಗೆ ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ; ಸಮಿತಿಗೆ ವರದಿ ನೀಡಲು ಸಮಯ ನಿಗದಿಪಡಿಸಿಲ್ಲ. ಎಂದು ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next