Advertisement

ಜಿಲ್ಲೆಗಳಲ್ಲಿ ಉದ್ಯೋಗ ಮೇಳ ನಡೆಸಲು ಸಮಿತಿ

06:30 AM Aug 26, 2018 | |

ಬೆಂಗಳೂರು: ನಿರುದ್ಯೋಗ ಸಮಸ್ಯೆ ನಿವಾರಣೆಗೆ ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಮೇಳ ನಡೆಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

Advertisement

ಈ ಸಮಿತಿಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಜಿಲ್ಲಾ ಪೊಲಿಸ್‌ ವರಿಷ್ಠಾಧಿಕಾರಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಧಿಕಾರಿ, ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಹಾಗೂ ಇತರ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸದಸ್ಯರಾಗಿರುತ್ತಾರೆ.

ಈ ಸಮಿತಿಯು ಜಿಲ್ಲೆಯಲ್ಲಿರುವ ಉದ್ಯೋಗ ನೀಡುವ ಎಲ್ಲ ಕಂಪನಿಗಳ ಮಾಹಿತಿ ಪಡೆದು ಸಭೆ ಕರೆಯವುದು. ಎರಡು ತಿಂಗಳಿಗೊಮ್ಮೆ ಕಂಪನಿಗಳಲ್ಲಿನ ಖಾಲಿ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯುವುದು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಿ, ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಮೇಳ ನಡೆಸುವುದು ಹಾಗೂ ಅಂಗವಿಕಲರಿಗೆ ಉದ್ಯೋಗ ಕಲ್ಪಿಸುವ ಕುರಿತಂತೆ ನಿಯಮಾವಳಿ ರೂಪಿಸಿ ಪ್ರಸ್ತಾವನೆಯನ್ನು ಸಂಪುಟ ಸಭೆಯ ಮುಂದೆ ಮಂಡಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಭೆಯಲ್ಲಿ ಕಂದಾಯ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಆರ್‌.ವಿ.ದೇಶಪಾಂಡೆ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next