Advertisement

ರಾಮನವಮಿ ಮೆರವಣಿಗೆ ವೇಳೆ ಹಿಂಸಾಚಾರ: 4 ರಾಜ್ಯಗಳಲ್ಲಿಕೋಮು ಘರ್ಷಣೆ; 2 ಸಾವು

02:12 PM Apr 11, 2022 | Team Udayavani |

ನವದೆಹಲಿ : ದೇಶದ ನಾಲ್ಕು ರಾಜ್ಯಗಳಲ್ಲಿ ಭಾನುವಾರ ನಡೆದ ರಾಮ ನವಮಿಯ ಮೆರವಣಿಗೆಯ ವೇಳೆ ಕೋಮು ಹಿಂಸಾಚಾರ ನಡೆದಿದ್ದು, ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಪೊಲೀಸರು ಸೇರಿ ಹಲವು ಮಂದಿ ಗಾಯಗೊಂಡಿದ್ದಾರೆ.

Advertisement

ಮಧ್ಯಪ್ರದೇಶದ ಖಾರ್ಗೋನ್ ನಗರದಲ್ಲಿ ಕರ್ಫ್ಯೂ ಹೇರಲಾಗಿದ್ದು, ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ 77 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಹಿಂಸಾಚಾರದಲ್ಲಿ ಖಾರ್ಗೋನ್‌ನ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಚೌಧರಿ ಅವರು ಗಾಯಗೊಂಡಿದ್ದಾರೆ ಮತ್ತು ಅವರ ಜೊತೆಗೆ ಆರು ಪೊಲೀಸರು ಸೇರಿದಂತೆ ಕನಿಷ್ಠ 24 ಜನರು ಗಾಯಗೊಂಡಿದ್ದಾರೆ.

ಭಾನುವಾರ ರಾಮನವಮಿ ಮೆರವಣಿಗೆಯಲ್ಲಿ ಕಲ್ಲು ತೂರಾಟ ನಡೆದ ನಂತರ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದರು.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘಟನೆಯನ್ನು “ದುರದೃಷ್ಟಕರ” ಎಂದು ಬಣ್ಣಿಸಿದ್ದು, ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಿಗೆ ಉಂಟಾದ ಹಾನಿಯನ್ನು ಗಲಭೆಕೋರರಿಂದ ವಸೂಲಿ ಮಾಡಲಾಗುವುದು ಎಂದು ಗುಡುಗಿದ್ದಾರೆ. ಗಲಭೆಕೋರರನ್ನು ಗುರುತಿಸಲಾಗಿದ್ದು, ಅವರನ್ನು ಬಿಡುವುದಿಲ್ಲ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಧ್ಯಪ್ರದೇಶದಲ್ಲಿ ಗಲಭೆಕೋರರಿಗೆ ಜಾಗವಿಲ್ಲ ಎಂದಿದ್ದಾರೆ.

Advertisement

“ನಾವು ಸಾರ್ವಜನಿಕ ಮತ್ತು ಖಾಸಗಿ ಆಸ್ತಿ ಮರುಪಡೆಯುವಿಕೆ ಕಾಯಿದೆಯನ್ನು ಅಂಗೀಕರಿಸಿದ್ದೇವೆ. ನಾವು ಕಾಯಿದೆಯಡಿಯಲ್ಲಿ ಕ್ಲೈಮ್ ಟ್ರಿಬ್ಯೂನಲ್ ಅನ್ನು ರಚಿಸುತ್ತಿದ್ದೇವೆ ಮತ್ತು ನಷ್ಟವನ್ನು ನಿರ್ಣಯಿಸಿದ ನಂತರ, ಗಲಭೆಕೋರರಿಂದ ಅದನ್ನು ವಸೂಲಿ ಮಾಡಲಾಗುವುದು” ಎಂದು ಚೌಹಾಣ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬರ್ವಾನಿ ಜಿಲ್ಲೆಯ ಸೆಂಧ್ವಾ ಪಟ್ಟಣದಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಇದೇ ರೀತಿಯಲ್ಲಿ ಕಲ್ಲು ತೂರಾಟ ವರದಿಯಾಗಿದ್ದು, ಅಲ್ಲಿ ಪೊಲೀಸ್ ಠಾಣೆಯ ಉಸ್ತುವಾರಿ ಮತ್ತು ಐವರು ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ ಪರಿಸ್ಥಿತಿಯನ್ನು ನಂತರ ನಿಯಂತ್ರಣಕ್ಕೆ ತರಲಾಗಿದೆ.

ಗುಜರಾತ್, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲೂ ರಾಮನವಮಿ ಮೆರವಣಿಗೆಗಳ ಸಮಯದಲ್ಲಿ ಹಿಂಸಾಚಾರ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದು, ಗುಜರಾತ್, ಜಾರ್ಖಂಡ್ ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next