Advertisement

ಕೋಮುಗಲಭೆ ಹಿಂದೆ ಕಾಂಗ್ರೆಸ್‌ ಕೈವಾಡ: ಅಶೋಕ್‌

12:35 AM Apr 21, 2022 | Team Udayavani |

ದಾವಣಗೆರೆ: ರಾಜ್ಯದಲ್ಲಿ ಎಲ್ಲಿಯೇ ಕೋಮು ಗಲಭೆಗಳಾದರೂ ಅದರ ಹಿಂದೆ ಕಾಂಗ್ರೆಸ್‌ ಕೈವಾಡ ಇರುತ್ತದೆ ಎಂದು ಕಂದಾಯ ಸಚಿವ ಆರ್‌. ಆಶೋಕ್‌ ಆರೋಪಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ, ಡಿ.ಜೆ. ಹಳ್ಳಿ, ಕೆ.ಜೆ. ಹಳ್ಳಿ ಗಲಭೆಯ ಹಿಂದೆ ಕಾಂಗ್ರೆಸ್‌ ಕೈವಾಡ ಇರುವುದು ಸ್ಪಷ್ಟವಾಗಿದೆ. ಅಲ್ಪಸಂಖ್ಯಾಕರ ಓಲೈಕೆಗಾಗಿ ಕಾಂಗ್ರೆಸ್‌ ಕೀಳು ರಾಜಕೀಯ ಮಾಡುತ್ತಿದೆ. ಗಲಾಟೆ ಮಾಡಿದವರನ್ನು ಅಮಾಯಕರು ಎನ್ನುತ್ತಾರೆ. ದಿಂಗಾಲೇಶ್ವರ ಸ್ವಾಮೀಜಿ ಒಂದು ಪಕ್ಷದ ಏಜೆಂಟರ ರೀತಿ ಮಾತಾಡುವುದು ಸರಿಯಲ್ಲ.

ಇದನ್ನೂ ಓದಿ:ತೋಕೂರು : 800 ವರ್ಷಗಳ ಇತಿಹಾಸವಿರುವ ದೇವಳದ ಗರ್ಭ ಗುಡಿಯಲ್ಲಿ ಚಿನ್ನದ ಜೋಡಿ ಮಯೂರ ಪತ್ತೆ

ಕಾಗಿನೆಲೆ, ಪೇಜಾವರ ಮಠ ಸೇರಿದಂತೆ ವಿವಿಧ ಮಠಗಳಿಗೆ ನಮ್ಮ ಸರಕಾರ ಅನುದಾನ ನೀಡಿದೆ. ಯಾರಿಗೂ ಇಲ್ಲದ ಕಮಿಷನ್‌ ಕಾಟ ಇವರೊಬ್ಬರಿಗೆ ಮಾತ್ರ ಹೇಗೆ ಬರುತ್ತದೆ? ಆರೋಪ ಮಾಡುತ್ತಿರುವ ಸ್ವಾಮೀಜಿ ಕನಿಷ್ಠ ಪಕ್ಷ ಯಾರಿಗೆ ಲಂಚ ಕೊಟ್ಟಿದ್ದಾರೆ ಎನ್ನುವುದನ್ನೂ ಹೇಳದೆ ರಾಜಕೀಯ ಭಾಷಣ ಮಾಡುವುದು ಸರಿಯಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next