Advertisement

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

12:16 AM Oct 21, 2024 | Team Udayavani |

ಬೆಂಗಳೂರು: ಅನುಕಂಪದ ಆಧಾರದ ಮೇಲೆ ನೌಕರಿ ಪ್ರಸ್ತಾವನೆಗಳನ್ನು ಆನ್‌ಲೈನ್‌ ತಂತ್ರಾಂಶದ ಮೂಲಕವೇ ನಿರ್ವಹಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಅಧಿಸೂಚನೆ ಹೊರಡಿಸಿದೆ. ಆನ್‌ಲೈನ್‌ ತಂತ್ರಾಂಶ ಇಇಡಿಎಸ್‌ನಲ್ಲಿ ನಿರ್ವಹಣೆಯ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ.

Advertisement

ಇಲಾಖೆ ವೆಬ್‌ಸೈಟ್‌ //schooleducation.karnataka.gov.in ನಲ್ಲಿಯೂ ಅಳವಡಿಸಲಾಗಿದೆ.

ಇಂತಹ ಅರ್ಜಿಗಳು ಪ್ರಸ್ತುತದಲ್ಲಿ ಭೌತಿಕವಾಗಿ ನಿರ್ವಹಣೆ ಮಾಡಲಾಗುತ್ತಿದ್ದು, ಇದರಿಂದ ಹಲವು ಪ್ರಕರಣಗಳಲ್ಲಿ ಅರ್ಜಿದಾರರಿಗೆ ತೊಂದರೆ ಉಂಟಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಅರ್ಜಿದಾರರಿಗೆ ಅನುಕೂಲವಾಗುವಂತೆ ಆನ್‌ಲೈನ್‌ ಪ್ರಕ್ರಿಯೆ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಂದಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next