Advertisement

ಮೃತ ನೌಕರನ ವಿವಾಹಿತ ಪುತ್ರಿಗೂ ಅನುಕಂಪದ ಉದ್ಯೋಗ ಅವಕಾಶ

12:22 AM Dec 17, 2020 | mahesh |

ಬೆಂಗಳೂರು: ಮೃತ ಸರಕಾರಿ ನೌಕರನ ವಿವಾಹಿತ ಪುತ್ರಿಯೂ ಅನುಕಂಪದ ಉದ್ಯೋಗಕ್ಕೆ ಅರ್ಹಳಾಗಿರುತ್ತಾಳೆ ಎಂದು ಮಹತ್ವದ ತೀರ್ಪು ನೀಡಿರುವ ಹೈಕೋರ್ಟ್‌, ಮದುವೆಯಾಗಿದ್ದಾಳೆಂಬ ಕಾರಣಕ್ಕೆ ಅನುಕಂಪದ ಉದ್ಯೋಗ ನಿರಾಕರಿಸಲು ಆಗದು ಎಂದು ಸ್ಪಷ್ಟವಾಗಿ ಹೇಳಿದೆ.

Advertisement

ವಿವಾಹಿತ ಪುತ್ರಿ ಅನುಕಂಪದ ಉದ್ಯೋಗ ಕೋರಲು ಅಡ್ಡಿಯಾಗಿದ್ದ ಕರ್ನಾಟಕ ನಾಗರಿಕ ಸೇವೆಗಳು (ಅನುಕಂಪದ ಆಧಾರದ ಮೇಲೆ ನೇಮಕಾತಿ) ಅಧಿನಿಯಮದ 1996ರ ನಿಯಮ 2(1)(ಎ)(ಐ), ನಿಯಮ 2(1)(ಬಿ) ಮತ್ತು 3 (2)(ಐ)(ಸಿ) ಅಕ್ರಮ ಮತ್ತು ಸಂವಿಧಾನಬಾಹಿರ ಎಂದು ಹೇಳಿರುವ ಹೈಕೋರ್ಟ್‌, ಈ ನಿಯಮ ದಲ್ಲಿದ್ದ “ಅವಿವಾಹಿತ’ ಪದವನ್ನು ತೆಗೆದುಹಾಕಿದೆ.

ಮದುವೆಯಾದ ಕಾರಣಕ್ಕೆ ಅನುಕಂಪದ ಉದ್ಯೋಗ ನೀಡಲು ನಿರಾಕರಿಸಿದ ಸರಕಾರದ ಕ್ರಮವನ್ನು ಪ್ರಶ್ನಿಸಿ ಭುವನೇಶ್ವರಿ ವಿ. ಪುರಾಣಿಕ್‌ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಹತ್ವದ ಆದೇಶ ನೀಡಿದೆ.
ವಿವಾಹಿತೆಯಾಗಿದ್ದರೂ ಹೆತ್ತವರಿಗೆ ಪುತ್ರಿಯೇ. ಆಕೆ ಅನುಕಂಪದ ಉದ್ಯೋಗಕ್ಕೆ ಅರ್ಹಳಲ್ಲ ಎಂಬ ನಿಯಮ ಲಿಂಗ ತಾರತಮ್ಯ ಮಾಡುತ್ತದೆ. ಪುತ್ರನ ವೈವಾಹಿಕ ಸ್ಥಾನಮಾನ ಅನುಕಂಪದ ಉದ್ಯೋಗಕ್ಕೆ ಅರ್ಹವಾಗಿರುವಾಗ, ವಿವಾಹಿತ ಮಗಳು ಕೂಡ ಅರ್ಹರಾಗಿರುತ್ತಾಳೆ ಎಂದು ಕೋರ್ಟ್‌ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next