Advertisement

ಲೋಕಾ ಚುನಾವಣೆಗೆ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧೆ

01:48 AM Feb 04, 2019 | Team Udayavani |

ದಾವಣಗೆರೆ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಕ್ಷೇತ್ರದಲ್ಲಿ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಅಭ್ಯರ್ಥಿಗಳ ಆಯ್ಕೆಯನ್ನು ಜನರಿಂದಲೇ ನಡೆಸಲಾಗುವುದು ಎಂದು ಪಕ್ಷದ ಸಂಸ್ಥಾಪಕ ಹಾಗೂ ಚಿತ್ರನಟ ಉಪೇಂದ್ರ ಹೇಳಿದರು.

Advertisement

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಯಕೆ ಇತ್ತು. ಕೆಲ ಕಾರಣದಿಂದ ಆಗಲಿಲ್ಲ. ಎಲ್ಲಾ ಕ್ಷೇತ್ರದಲ್ಲಿ ಸ್ಥಳೀಯರನ್ನೇ ಕಣಕ್ಕಿಳಿಸಲಾಗುವುದು. ಈ ಬಾರಿ ಯಾವುದಾದರೂ ಕ್ಷೇತ್ರದಲ್ಲಿ ಅಭ್ಯರ್ಥಿ ಇಲ್ಲದೇ ಹೋದಲ್ಲಿ ನಾನು ಸ್ಪರ್ಧಿಸುತ್ತೇನೆ. ಗೆದ್ದರೆ ಸಿನಿಮಾರಂಗದಿಂದ ನಿವೃತ್ತಿ ಆಗುತ್ತೇನೆ. ಏಕೆಂದರೆ ನಾನು ಆಗ ಜನರ ಸೇವಕ. ಉತ್ತಮ ಪ್ರಜಾಕೀಯ ಪಕ್ಷಕ್ಕೂ…. ಬುದ್ಧಿವಂತರಿಗೆ ಮಾತ್ರ…ಎಂಬ ಟ್ಯಾಗ್‌ಲೈನ್‌ ಇಡುವ ಬಗ್ಗೆ ಗಮನ ಹರಿಸುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next