Advertisement

ಬಿಜೆಪಿ ರಾಷ್ಟ್ರೀಯ ಪಕ್ಷ,ಚುನಾವಣಾ ಟಿಕೆಟ್‌ಗಾಗಿ ಪೈಪೋಟಿ ಸಹಜ: ಸಿಎಂ ಬೊಮ್ಮಾಯಿ

05:31 PM Dec 07, 2022 | Team Udayavani |

ತುಮಕೂರು : 2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಸ್ಪರ್ಧಿಸಲು ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಹಲವಾರು ಆಕಾಂಕ್ಷಿಗಳಿದ್ದು, ಚುನಾವಣಾ ಟಿಕೆಟ್‌ಗಾಗಿ ಪೈಪೋಟಿ ಇದೆ ಮತ್ತು ರಾಷ್ಟ್ರೀಯ ಪಕ್ಷವಾಗಿ ಎಲ್ಲವೂ ಸಮತೋಲನದಲ್ಲಿರುತ್ತದೆ.ಗೆಲುವಿನ ವಿಶ್ವಾಸ ಹೊಂದಿರುವ ಪಕ್ಷಕ್ಕೆ ಇದು ಸಹಜ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.

Advertisement

ರಾಜ್ಯಾದ್ಯಂತ ನಡೆಯುತ್ತಿರುವ ‘ಜನಸಂಕಲ್ಪ ಯಾತ್ರೆ’ಗೆ ನಿರೀಕ್ಷೆಗೂ ಮೀರಿ ಜನಸ್ಪಂದನೆ ವ್ಯಕ್ತವಾಗುತ್ತಿದ್ದು, ಮುಂದಿನ ದಿನಗಳಲ್ಲಿ ‘ವಿಜಯ ಸಂಕಲ್ಪ ಯಾತ್ರೆ’ಯಾಗಿ ಹೊರಹೊಮ್ಮಲಿದೆ ಎಂದು ಹೇಳಿದರು.

“ನಾವು ಈಗಾಗಲೇ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ, ಕೆಲವು ಕರಾವಳಿ ಜಿಲ್ಲೆಗಳು ಮತ್ತು ಬೆಳಗಾವಿ ಪ್ರದೇಶಗಳಲ್ಲಿ ಪ್ರವಾಸ ಮಾಡಿದ್ದೇವೆ, ನಮಗೆ ಭಾರಿ ಪ್ರತಿಕ್ರಿಯೆ ಸಿಗುತ್ತಿದೆ. ಸಾರ್ವಜನಿಕ ಬೆಂಬಲವನ್ನು ನೋಡಿದರೆ, ಇದು ನಮ್ಮ ನಿರೀಕ್ಷೆಗಳನ್ನು ಮೀರಿದೆ. ಮುಂದಿನ ದಿನಗಳಲ್ಲಿ ಈ ಜನಸಂಕಲ್ಪ ಯಾತ್ರೆ ವಿಜಯ ಸಂಕಲ್ಪವಾಗಿ ಪರಿವರ್ತನೆಯಾಗುವ ವಿಶ್ವಾಸವಿದೆ ಎಂದು ಬೊಮ್ಮಾಯಿ ಹೇಳಿದರು.

ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿ ಗದ್ದಲದ ವರದಿಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ ‘ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿರುವ ಪಕ್ಷದಲ್ಲಿ ಸ್ಪರ್ಧೆ ಸಹಜ, ಆದರೆ ನಮ್ಮದು ರಾಷ್ಟ್ರೀಯ ಪಕ್ಷವಾದ್ದರಿಂದ. ಎಲ್ಲವನ್ನೂ ಸರಿದೂಗಿಸಿಕೊಂಡು ಗೆಲುವಿನತ್ತ ಕೆಲಸ ಮಾಡುತ್ತೇವೆ ಎಂದರು.

ಎಕ್ಸಿಟ್ ಪೋಲ್‌ಗಳು ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳುವ ಪರವಾಗಿರುವುದರೊಂದಿಗೆ, ಕರ್ನಾಟಕದಲ್ಲಿಯೂ “ಆಡಳಿತ ಪರ ಜನಾದೇಶ” ಸಾಧ್ಯತೆಯಿದೆ ಎಂದು ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದರು.

Advertisement

ಬಿಜೆಪಿಯು ಅಕ್ಟೋಬರ್‌ನಲ್ಲಿ ರಾಯಚೂರಿನಿಂದ ‘ಜನಸಂಕಲ್ಪ ಯಾತ್ರೆ’ಯನ್ನು ಪ್ರಾರಂಭಿಸಿತ್ತು. 2023 ರ ಏಪ್ರಿಲ್-ಮೇ ನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, 224 ಸ್ಥಾನಗಳಲ್ಲಿ ಪಕ್ಷ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿ ಯಾತ್ರೆ ನಡೆಸುತ್ತಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next