Advertisement

ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧೆ: ಸಿದ್ದರಾಮಯ್ಯ

12:52 PM Oct 24, 2017 | |

ಹುಬ್ಬಳ್ಳಿ: ಉತ್ತರ ಕರ್ನಾಟಕದಿಂದ ತಾವು ಸ್ಪರ್ಧೆಗಿಳಿಯಲು ಈ ಭಾಗದಲ್ಲಿ ಹೆಚ್ಚು ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂಬುದು ಸುಳ್ಳು. ತಾವು  ಮೈಸೂರು ಜಿಲ್ಲೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು. 

Advertisement

ಸೋಮವಾರ  ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರಕಾರ ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು, ಜನಪ್ರಿಯ ಯೋಜನೆಗಳ ಕುರಿತಾಗಿ ಜನರಿಗೆ ಮಾಹಿತಿ ನೀಡುವ ಉದ್ದೇಶದಿಂದ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗುತ್ತದೆ ಎಂದರು.

ಧಾರವಾಡದಲ್ಲಿ ಕೈಗೊಂಡ ಸಮಾವೇಶ ಕಾಂಗ್ರೆಸ್‌ ಸಮಾವೇಶ ಎಂದು  ಪಕ್ಷದವರು ಆರೋಪಿಸುವುದಾದರೆ, ಪ್ರಧಾನಿ ಮೋದಿಯವರು ಗುಜರಾತ್‌ನಲ್ಲಿ ಮಾಡುತ್ತಿರುವ ಸಮಾವೇಶಗಳು ಯಾವುದು ಎಂದು ಪ್ರಶ್ನಿಸಿದ ಅವರು,  ಇದು ಕಾಂಗ್ರೆಸ್‌ ಪಕ್ಷದ ಸಮಾವೇಶವಲ್ಲ ಎಲ್ಲ ಪಕ್ಷಗಳ ಜನಪ್ರತಿನಿಧಿಗಳಿಗೂ ಆಹ್ವಾನ ನೀಡಲಾಗಿದೆ ಎಂದರು.

ಕಲ್ಲಿದ್ದಲು ಹಗರಣ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಆರೋಪ ಚುನಾವಣೆ ದೃಷ್ಟಿಕೋನದಿಂದಾಗಿದ್ದು, ಯಾವುದೇ ಸತ್ಯವಿಲ್ಲ. ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ್‌, ಸಚಿವ ಡಿ.ಕೆ. ಶಿವಕುಮಾರ ತಕ್ಕ ಉತ್ತರ ನೀಡಿದ್ದಾರೆ. ತಮ್ಮ ಸರಕಾರದಲ್ಲಿ ಯಾವುದೇ ಹಗರಣ ನಡೆಸಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next