Advertisement

ಚಿಕ್ಕೋಡಿಯಿಂದಲೇ ಸ್ಪರ್ಧೆ

12:45 AM Mar 19, 2019 | Team Udayavani |

ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಹಾಲಿ ಸಂಸದ ಪ್ರಕಾಶ ಹುಕ್ಕೇರಿಯವರೇ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಖಾತ್ರಿಯಾಗಿದೆ.

Advertisement

ನಗರದಲ್ಲಿ ಸೋಮವಾರ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಈ ವಿಷಯ ಪ್ರಕಟಿಸಿದರು.

ಈ ಕ್ಷೇತ್ರದಿಂದ ಹುಕ್ಕೇರಿ ಹೆಸರನ್ನಷ್ಟೇ ಹೈಕಮಾಂಡ್‌ಗೆ ಶಿಫಾರಸು ಮಾಡಲಾಗಿದೆ ಎಂದೂ ಸ್ಪಷ್ಟಪಡಿಸಿದರು. ಸಭೆಯಲ್ಲಿ ಹುಕ್ಕೇರಿ ಪಾಲ್ಗೊಳ್ಳುವ ಮೂಲಕ ಅವರ ಸ್ಪರ್ಧೆ ಬಗೆಗಿದ್ದ ಉಹಾಪೋಹಗಳು ಸುಳ್ಳಾಗಿವೆ. ಸಂಸದನಾಗಿ ಐದು ವರ್ಷಗಳಲ್ಲಿ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರಗಳಲ್ಲೂ ಅಭಿವೃದಿಟಛಿ ಕೈಗೊಳ್ಳಲಾಗಿದೆ. ಕೋಟ್ಯಂತರ ರೂ. ವೆಚ್ಚದ ಕಾಮಗಾರಿ ಅನುಷ್ಠಾನಗೊಳಿಸಲಾಗಿದೆ ಎಂದು ಹುಕ್ಕೇರಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next