Advertisement

ಶಿಕಾರಿಪುರದಿಂದಲೇ ಸ್ಪರ್ಧೆ: ಬಿಎಸ್‌ವೈ ಉಲ್ಟಾ

06:00 AM Sep 24, 2017 | Team Udayavani |

ಶಿರಾಳಕೊಪ್ಪ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರದಿಂದಲೇ ಸ್ಪರ್ಧಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.  ಈ ಮೂಲಕ ಉತ್ತರ ಕರ್ನಾಟಕ ಭಾಗದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಚರ್ಚೆಗೆ ತೆರೆ ಎಳೆದಿರುವ ಯಡಿಯೂರಪ್ಪ, ನನ್ನ ರಾಜಕೀಯ ಜೀವನಕ್ಕೆ ಶಕ್ತಿ ಕೊಟ್ಟ ಕ್ಷೇತ್ರ ಶಿಕಾರಿಪುರದಿಂದಲೇ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ.

Advertisement

ಶನಿವಾರ ಪಟ್ಟಣದ ನೇರಲಗಿಯಲ್ಲಿ ನಡೆದ ಬಿಜೆಪಿ ಬೂತ್‌ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,” ಶಿಕಾರಿಪುರದಿಂದಲೇ ಸ್ಪರ್ಧಿಸಬೇಕೆಂಬುದು ಕಾರ್ಯಕರ್ತರ ಒತ್ತಾಸೆಯಾಗಿದೆ. ಕೇವಲ ನಾಮಪತ್ರ ಸಲ್ಲಿಸಿ ನೀವು ರಾಜ್ಯ ಪ್ರಚಾರಕ್ಕೆ ಹೋಗಿ. ಚುನಾವಣೆಯಲ್ಲಿ ನಿಮ್ಮನ್ನು ಗೆಲ್ಲಿಸುವ ಹೊಣೆ ತಮ್ಮದೆಂದು ಕಾರ್ಯಕರ್ತರು ಹೇಳಿದ್ದಾರೆ. ಹೀಗಾಗಿ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸುವೆ. ಆದರೆ ಕಾರ್ಯಕರ್ತ ಒತ್ತಾಯ ಸೇರಿದಂತೆ ಕ್ಷೇತ್ರದ ವಿಷಯಗಳನ್ನು ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟರೆ ಶಿಕಾರಿಪುರದಿಂದಲೇ ಸ್ಪರ್ಧಿಸಲು ಅನುವು ಮಾಡಿಕೊಡಬಹುದು’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ನನಗೆ ಕ್ಷೇತ್ರದ ಮತದಾರರ ಮೇಲೆ ಸಂಪೂರ್ಣ ವಿಶ್ವಾಸವಿದೆ. ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ 6ನೇ ಅತಿ ಹೆಚ್ಚು ಮತ ಗಳಿಸಿದ ಕ್ಷೇತ್ರ ಎಂಬ ಹೆಗ್ಗಳಿಕೆ ಶಿಕಾರಿಪುರಕ್ಕಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿ ರಾಜ್ಯದ 150 ಕ್ಷೇತ್ರದಲ್ಲಿ ಗೆಲ್ಲಬೇಕಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next