Advertisement

ಖಾದರ್‌ ವಿರುದ್ಧ ದೂರು

10:43 PM Dec 22, 2019 | Lakshmi GovindaRaj |

ಪುತ್ತೂರು: ಮಂಗಳೂರಿನ ಕ್ಷೋಭೆಗೆ ಶಾಸಕ ಯು.ಟಿ.ಖಾದರ್‌ ಅವರು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನೀಡಿದ ಪ್ರಚೋದನಾಕಾರಿ ಹೇಳಿಕೆಯೇ ಕಾರಣ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗ ದಳ ಪುತ್ತೂರು ಘಟಕಗಳು ಪುತ್ತೂರು ನಗರ ಪೊಲೀಸ್‌ ಠಾಣೆಗೆ ದೂರು ನೀಡಿವೆ. ಮಂಗಳೂರಿನಲ್ಲಿ ಕರ್ಫ್ಯೂ, ಗೋಲಿಬಾರ್‌ ಹಾಗೂ ದ.ಕ.ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಾಗಲು ಖಾದರ್‌ ಅವರ ಪ್ರಚೋದನಕಾರಿ ಹೇಳಿಕೆಯೇ ಕಾರಣ.

Advertisement

ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ವಾಸ್ತವ ಅಂಶವನ್ನು ಮರೆಮಾಚಿ ತಪ್ಪು ಮಾಹಿತಿಗಳನ್ನು ಕೊಡುವ ಮೂಲಕ ಒಂದು ಸಮುದಾಯದವರನ್ನು ಪ್ರತಿಭಟನೆ ಮತ್ತು ದಂಗೆಗೆ ಇಳಿಯುವಂತೆ ಖಾದರ್‌ ಪ್ರೇರೇಪಿಸಿದ್ದಾರೆ. ಆ ಮೂಲಕ ಶಾಂತವಾಗಿದ್ದ ಜಿಲ್ಲೆಯಲ್ಲಿ ಅಶಾಂತಿ ನಿರ್ಮಾಣ ಮಾಡಿದ್ದಾರೆ ಎಂದು ಹಿಂದೂ ಸಂಘಟನೆಗಳು ದೂರಿನಲ್ಲಿ ತಿಳಿಸಿವೆ. ಬಜರಂಗದಳದ ಪುತ್ತೂರು ಪ್ರಖಂಡ ಸಂಚಾಲಕ ಹರೀಶ್‌ ಕುಮಾರ್‌ ದೋಳ್ಪಾಡಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next