Advertisement

ಲಿಂಬಾವಳಿ ವಿರುದ್ಧ ದೂರು

11:13 PM Apr 08, 2020 | Sriram |

ಬೆಂಗಳೂರು: ಮಹದೇವಪುರ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಗೃಹ ಸಚಿವ, ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ದೂರು ಸಲ್ಲಿಸಿದ್ದಾರೆ.

Advertisement

ಸರಕಾರ ಕೊಡುತ್ತಿರುವ ಆಹಾರ ಅಥವಾ ವಸ್ತುಗಳ ಮೇಲೆ ತಮ್ಮ ಭಾವಚಿತ್ರಗಳನ್ನು ಹಾಕಿಕೊಂಡು ಅರವಿಂದ ಲಿಂಬಾವಳಿ ಪ್ರಚಾರ ತೆಗೆದುಕೊಳ್ಳುತ್ತಿದ್ದಾರೆ ಎಂದವರು ದೂರು ನೀಡಿದ್ದಾರೆ.

ಈ ಬಗ್ಗೆ ಸ್ಥಳೀಯ ಕಾಂಗ್ರೆಸ್‌ ನಾಯಕರು ಪ್ರಶ್ನಿಸಿದರೆ ನಮ್ಮ ಸರಕಾರ ನೀಡುತ್ತಿದೆ. ಹೀಗಾಗಿ ನಾವು ಭಾವಚಿತ್ರ ಹಾಕಿಕೊಳ್ಳುವುದಾಗಿ ಹೇಳಿದ್ದಾರೆ. ಆದರೆ ಸರಕಾರದ ಹಣ ಖರ್ಚು ಮಾಡಿ ಆಹಾರ ಪದಾರ್ಥ ವಿತರಣೆ ಮಾಡುತ್ತಿರುವುದನ್ನು ಯಾವುದೇ ಪಕ್ಷ ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವುದು ಸರಿಯಲ್ಲ. ಹೀಗಾಗಿ ದುರುಪಯೋಗ ಪಡಿಸಿಕೊಳ್ಳುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ರದ ಮೂಲಕ ಡಿ.ಕೆ.ಶಿವಕುಮಾರ್‌ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next