Advertisement

ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ದೂರು

11:59 AM Jun 10, 2018 | Team Udayavani |

ಬೆಂಗಳೂರು: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಿರಿಯ ವಕೀಲ ನಟರಾಜ್‌ ಶರ್ಮಾ ಅವರು ದೂರು ದಾಖಲಿಸಿದ್ದು,  ಕೇಂದ್ರ ಸರ್ಕಾರ ಗಂಗಾ ನದಿ ಶುದ್ಧಿಕರಣ ಯೋಜನೆ ಪೂರ್ಣಗೊಳಿಸಿಲ್ಲ.

Advertisement

ಕಪ್ಪು ಹಣವನ್ನು ಭಾರತಕ್ಕೆ ತಂದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಉಡುಪಿಯ ಪೇಜಾವರ ಶ್ರೀಗಳು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ಪೇಜಾವರ ಶ್ರೀಗಳು ಒಬ್ಬ ಸನ್ಯಾಸಿ. ಅವರಿಗೆ ವಯಸ್ಸಾಗಿದೆ. ಅವರು ಸುದ್ದಿ ಮಾಧ್ಯಮಗಳನ್ನು ಗಮನಿಸಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ನಟರಾಜ್‌ ಶರ್ಮಾ ದೂರು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next