Advertisement

ಷಡಕ್ಷರಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

10:54 PM Apr 27, 2023 | Team Udayavani |

ಬೆಂಗಳೂರು: ಈ ಮಧ್ಯೆ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಕ್ಷರಿ ವಿರುದ್ಧ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಷಡಕ್ಷರಿ, “ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಆರ್ಥಿಕ ಇಲಾಖೆ ಆದೇಶ ಹೊರಡಿಸಲಿದೆ”  ಎಂದು ಹೇಳಿಕೆ ನೀಡಿದ್ದಾರೆ.

Advertisement

ಇದು ರಾಜಕೀಯ ದುರುದ್ದೇಶದಿಂದ ಕೂಡಿದ್ದು, ರಾಜ್ಯದಲ್ಲಿರುವ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರ ಮತದಾರರ‌ ಮೇಲೆ ಪ್ರಭಾವ ಬೀರುವಂತಿದೆ. ಈ ಹೇಳಿಕೆಯಲ್ಲಿ ಚುನಾವಣಾ ಆಯೋಗ ಮತ್ತು ಆರ್ಥಿಕ ಇಲಾಖೆ ಹೆಸರನ್ನೂ ಉಲ್ಲೇಖೀಸಲಾಗಿದೆ. ಈ ಹೇಳಿಕೆ ನೀಡಲು ಆಯೋಗ ಅಥವಾ ಸರ್ಕಾರ ಅನುಮತಿ ನೀಡಿಲ್ಲ. ಆದ್ದರಿಂದ ಷಡಕ್ಷರಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್‌ಬಾಬು ದೂರಿನಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next