Advertisement

ಕೋಳಿವಾಡ ವಿರುದ್ಧ ಲೋಕಸಭಾ ಸ್ಪೀಕರ್‌ಗೆ ದೂರು

03:45 AM Jul 06, 2017 | Team Udayavani |

ಮಂಡ್ಯ: ವಿಧಾನಸಭೆ ಕಲಾಪಗಳಲ್ಲಿ ಭಾಗವಹಿಸದೆ, ಕ್ಷೇತ್ರದ ಜನರ ಸಮಸ್ಯೆಗಳಿಗೂ ಸ್ಪಂದಿಸದೆ ಬೇಜವಾಬ್ದಾರಿತನ ಪ್ರದರ್ಶಿಸುತ್ತಿರುವ ಶಾಸಕ ಅಂಬರೀಶ್‌ ವಿರುದ್ಧ ಮೂರು ಬಾರಿ ದೂರು ನೀಡಿದರೂ ಕ್ರಮ ಕೈಗೊಳ್ಳುವಲ್ಲಿ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ವಿಫ‌ಲರಾಗಿದ್ದಾರೆ ಎಂದು ಆರೋಪಿಸಿ ಜೆಡಿಯು ಜಿಲ್ಲಾಧ್ಯಕ್ಷ ಬಿ.ಎಸ್‌.ಗೌಡ ಲೋಕಸಭಾ ಸ್ಪೀಕರ್‌ಗೆ ದೂರು ನೀಡಿದ್ದಾರೆ.

Advertisement

ಶಾಸಕರಾಗಿ ಅಂಬರೀಶ್‌ ಸಮರ್ಥವಾಗಿ ಕಾರ್ಯನಿರ್ವಹಿಸುವಲ್ಲಿ ವಿಫ‌ಲರಾಗಿದ್ದಾರೆ. ಸಚಿವ ಸ್ಥಾನದಿಂದ ಕೆಳಗಿಳಿದ ಬಳಿಕ ಕ್ಷೇತ್ರಕ್ಕೂ ಸರಿಯಾಗಿ ಬರುತ್ತಿಲ್ಲ. ಜನರ ಸಮಸ್ಯೆಗಳನ್ನು ಆಲಿಸುತ್ತಿಲ್ಲ. ಕ್ಷೇತ್ರದ ಸಮಸ್ಯೆಗಳಿಗೂ ಸ್ಪಂದಿಸುತ್ತಿಲ್ಲ. ಶಾಸಕರಾಗಿ ತಮ್ಮ ಕಾರ್ಯನಿರ್ವಹಿಸಲು ವಿಫ‌ಲರಾಗಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಪೀಕರ್‌ ಕೆ.ಬಿ.ಕೋಳಿವಾಡಗೆ ದೂರು ಸಲ್ಲಿಸಲಾಗಿತ್ತು. ಆದರೆ, ಅಂಬರೀಶ್‌ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಧಾನ 
ಸಭಾಧ್ಯಕ್ಷರು ವಿಫ‌ಲರಾಗಿದ್ದಾರೆ. ವಿಧಾನಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತು ಪûಾತೀತವಾಗಿ ಕೆಲಸ ನಿರ್ವಹಿಸದೆ ಪಕ್ಷಪಾತ ಧೋರಣೆ ಪ್ರದರ್ಶಿಸಿದ್ದಾರೆ. ಅದಕ್ಕಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next