Advertisement

ಸಿದ್ದು, ಲಾಡ್‌ ವಿರುದ್ಧ ಪೊಲೀಸರಿಗೆ ದೂರು

12:11 PM Dec 01, 2021 | Team Udayavani |

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಮುಖಂಡ ಅನಿಲ್‌ ಲಾಡ್‌ ಅವರ ಹೇಳಿಕೆ ಖಂಡಿಸಿ ಹಾಗೂ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮಂಗಳವಾರ ಹೈಗ್ರೌಂಡ್‌ ಪೊಲೀಸ್‌ ಠಾಣೆಗೆ ಬಿಜೆಪಿ ದೂರು ನೀಡಿದೆ.

Advertisement

ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಬಿಜೆಪಿಯ ರಾಜ್ಯ ಪ್ರ. ಕಾರ್ಯದರ್ಶಿ ಅಶ್ವತ್ಥನಾರಾಯಣ, ಇಬ್ಬರನ್ನು ತಕ್ಷಣ ಬಂಧಿಸಲು ಒತ್ತಾಯಿಸಲಾಗಿದೆ. ದಲಿತರಿಗೆ ಅವಮಾನ, ಸಂವಿಧಾನಕ್ಕೆ ಅಗೌರವ ತೋರಿದ ಇವರಿಬ್ಬರ ಹೇಳಿಕೆಗಳ ವಿರುದ್ಧ ಪಕ್ಷವು ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಲಿದೆ. ನ.26ರಂದು ಸಂವಿಧಾನ ದಿನ ಆಚರಿಸಲಾಗಿತ್ತು.

ಸಂವಿಧಾನ ದಿನಾಚರಣೆಯನ್ನು ಟಿಎಂಸಿ, ಕಾಂಗ್ರೆಸ್‌, ಕಮ್ಯುನಿಸ್ಟ್‌ ಪಕ್ಷದ ನೇತೃತ್ವದ ನೇತೃತ್ವದಲ್ಲಿ ಬಹಿಷ್ಕರಿಸಿದ ಕ್ರಮವು ಡಾ.ಅಂಬೇಡ್ಕರ್‌ ಮತ್ತು ಅವರು ಬರೆದ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಖಂಡಿಸಿದರು.

ಇದನ್ನೂ ಓದಿ;- ಎನ್‌ಇಪಿ: ಶಿಕ್ಷಣ ಸುಧಾರಣೆಗೆ ಮಹತ್ವ

ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ಮಿಟ್ಟಲ್‌ ಕೋಡ್‌, ರಾಜ್ಯ ಕಾರ್ಯಕಾರಿಣಿ ಸದಸ್ಯ ವಿವೇಕ್‌ ರೆಡ್ಡಿ, ಎಂ.ಸಿ.ಎ. ಅಧ್ಯಕ್ಷ ಮುನಿಕೃಷ್ಣ, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಬಿ. ನಾರಾಯಣ್‌, ಎಸ್‌.ಸಿ. ಮೋರ್ಚಾ ರಾಜ್ಯ ಪ್ರ. ಕಾರ್ಯದರ್ಶಿ ಜಗದೀಶ್‌, ಉಪಾಧ್ಯಕ್ಷ ವೆಂಕಟೇಶ್‌, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next