Advertisement
ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮಾಂತರ ಪ್ರದೇಶದಲ್ಲಿ ಮತದಾನ ಪ್ರಮಾಣ ಹೆಚ್ಚಾಗಿದೆ.
Related Articles
Advertisement
ಕೃತಜ್ಞತೆ: ಚುನಾವಣೆ ಪ್ರಚಾರದಿಂದ ಮತದಾನದವರೆಗೂ ಎಲ್ಲಾ ಕಾರ್ಯಕರ್ತರು ಹಾಗೂ ಮುಖಂಡರು ನನಗೆ ಕೈಜೋಡಿಸಿದ್ದಾರೆ. ಜೊತೆಗೆ ಚುನಾವಣೆ ಯಶಸ್ಸಿಗೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಚುನಾವಣಾ ಆಯೋಗದ ಪಾತ್ರ ಮಹತ್ವದ್ದು. ಈ ಹಿನ್ನೆಲೆಯಲ್ಲಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಆರೋಪ ಸಲ್ಲದು: ಚುನಾವಣೆಯಲ್ಲಿ ಮತದಾರರ ಕೈ ಬೆರಳಿಗೆ ಹಚ್ಚುವ ಅಳಿಸಲಾಗದ ಶಾಯಿ ಮೈಸೂರಿನಲ್ಲಿ ತಯಾರಿಸುವುದು ನಮ್ಮ ಹೆಮ್ಮೆ, ನಾಲ್ವಡಿ ಕೃಷ್ಣರಾಜ ಒಡೆಯರ್ ದೂರದೃಷ್ಟಿಯ ಮೈಸೂರು ಅರಗು ಮತ್ತು ಬಣ್ಣದ ಕಾರ್ಖಾನೆ ಎಂದಿಗೂ ನಷ್ಟ ಅನುಭವಿಸಿಲ್ಲ.
ದೇಶ- ವಿದೇಶಗಳಿಗೆ ಅಳಿಸಲಾಗದ ಶಾಯಿಯನ್ನು ರಫ್ತು ಮಾಡುತ್ತಿದ್ದು, ಗುಣಮಟ್ಟದಲ್ಲಿ ಎಂದಿಗೂ ರಾಜಿಮಾಡಿಕೊಂಡಿಲ್ಲ. ಅಂತಹ ಕಾರ್ಖಾನೆ ಬಗ್ಗೆ ಆರೋಪ ಸಲ್ಲದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್, ಪಾಲಿಕೆ ಮಾಜಿ ಮೇಯರ್ ನರಸಿಂಹ ಅಯ್ಯಂಗಾರ್ ಮತ್ತಿತರರು ಹಾಜರಿದ್ದರು.