Advertisement

ನೆರೆ ನಿರ್ವಹಣೆಗೆ ಸಂಪೂರ್ಣ ಸಹಕಾರ

11:21 PM Aug 10, 2019 | Team Udayavani |

ಧಾರವಾಡ: ಬೆಳಗಾವಿ, ಬಾಗಲಕೋಟೆ, ಧಾರವಾಡ ಸೇರಿ ವಿವಿಧ ಜಿಲ್ಲೆಗಳಲ್ಲಿ ಉಂಟಾಗಿರುವ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿಪತ್ತು ನಿರ್ವಹಣಾ ನಿಧಿ ಗೆ ಮುಂಗಡವಾಗಿ 200 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಸಿಎಂ ಯಡಿಯೂರಪ್ಪ ಅವರು ಸಹ ವಿಶೇಷ ಪರಿಹಾರ ಕೋರಲು ದೆಹಲಿಗೆ ತೆರಳುತ್ತಿದ್ದಾರೆ.

Advertisement

ಕೇಂದ್ರ ಸರ್ಕಾರ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಗಳ ಮೇಲೆ ನಿರಂತರ ನಿಗಾವಿರಿಸಿದೆ ಎಂದರು. ಪ್ರತಿದಿನ ಮಾಹಿತಿ ಪಡೆಯಲಾಗುತ್ತಿದ್ದು, ರಾಜ್ಯಕ್ಕೆ ಈಗಾಗಲೇ 15 ಎನ್‌ಡಿಆರ್‌ಎಫ್‌ ತಂಡಗಳನ್ನು ಕಳುಹಿಸಲಾಗಿದೆ. ಧಾರವಾಡ ಜಿಲ್ಲೆಗೂ ಒಂದು ತಂಡ ಬಂದಿದೆ. ಹೆಚ್ಚುವರಿಯಾಗಿ ಇನ್ನೂ ಐದು ತಂಡಗಳು ಬೆಂಗಳೂರಿಗೆ ಆಗಮಿಸಿವೆ. ನಾಲ್ಕು ಹೆಲಿಕಾಪ್ಟರ್‌ಗಳನ್ನು ಕಳುಹಿಸಲಾಗಿದೆ ಎಂದು ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next