Advertisement

ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿ

11:28 PM Aug 15, 2019 | Team Udayavani |

ಶ್ರೀರಂಗಪಟ್ಟಣ: ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿದ್ದು, ಗುರುವಾರದಿಂದ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ಕಲ್ಪಿಸಲಾಗಿದೆ. ಪ್ರಸ್ತುತ ವರ್ಷ ಪ್ರಥಮ ಬಾರಿಗೆ ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ನೀರಿನ ಮಟ್ಟ ಸಂಗ್ರಹಿಸಿಟ್ಟುಕೊಳ್ಳಲಾಗಿದೆ. ಕೊಡಗಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಗುರುವಾರ ಕೆಆರ್‌ಎಸ್‌ ಜಲಾಶಯಕ್ಕೆ 16,220 ಕ್ಯೂಸೆಕ್‌ ಒಳ ಹರಿವಿದ್ದು, ಅಣೆಕಟ್ಟೆಯಿಂದ ಅಷ್ಟೇ ನೀರನ್ನು ನಾಲೆಗಳು ಹಾಗೂ ನದಿ ಮೂಲಕ ಹೊರಬಿಡಲಾಗುತ್ತಿದೆ.

Advertisement

ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಇಳಿಮುಖಗೊಂಡ ಹಿನ್ನೆಲೆಯಲ್ಲಿ ಸೋಮವಾರ ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ಕೊಡಗಿನಲ್ಲೂ ಮಳೆ ಸಾಧಾರಣ ನಿಲ್ಲುವ ಹಂತದಲ್ಲಿದ್ದು, ಜಲಾಶಯಕ್ಕೆ ಅಗತ್ಯವಿರುವ ಸಂಪೂರ್ಣ ಗರಿಷ್ಠ ಮಟ್ಟದ ನೀರನ್ನು ಸಂಗ್ರಹಿಸಿಕೊಂಡು, ಮೇಲಿಂದ ಬಂದ ನೀರು ಜಲಾಶಯದಿಂದ ಹಾಗೆಯೇ ಹೊರ ಬಿಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next