Advertisement

Mangaluru ನಂತೂರು ಮೇಲ್ಸೇತುವೆ ಪೂರ್ವಭಾವಿ ಕಾರ್ಯ ಪೂರ್ಣಗೊಳಿಸಿ

01:20 AM Jul 21, 2024 | Team Udayavani |

ಮಂಗಳೂರು: ನಂತೂರು ವಾಹನ ಮೇಲ್ಸೇತುವೆ ನಿರ್ಮಾಣಕ್ಕೆ ಪೂರ್ವಭಾವಿಯಾಗಿ ಅಗತ್ಯವಿರುವ ಕಟ್ಟಡ, ರಚನೆಗಳ ತೆರವು, ವಿದ್ಯುತ್‌ ಲೈನ್‌, ನೀರಿನ ಪೈಪ್‌ಲೈನ್‌ ಸ್ಥಳಾಂತರ ಕುರಿತಂತೆ ಬಾಕಿ ಇರುವ ಎಲ್ಲ ಕಾರ್ಯಗಳನ್ನೂ ತ್ವರಿತವಾಗಿ ಕೈಗೊಳ್ಳುವಂತೆ ಸಂಸದ ಕ್ಯಾ| ಬ್ರಿಜೇಶ್‌ ಚೌಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಂತೂರು ಹಾಗೂ ಕೆಪಿಟಿಯ ವಾಹನ ಮೇಲ್ಸೇತುವೆಗಳ ಕುರಿತು ಶನಿವಾರ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು.

ನಗರದ ವ್ಯಾಪ್ತಿಯ ಹೆದ್ದಾರಿಗಳಲ್ಲಿ ಹಿಂದೆ ನಿರ್ಮಿಸಿರುವ ಫ್ಲೆ$çಓವರ್‌ಗಳು ಗುಣಮಟ್ಟ ಹೊಂದಿಲ್ಲ. ಅದು ಎನ್‌ಎಚ್‌ಎಐನ ಘನತೆಗೂ ತಕ್ಕು ದಲ್ಲ. ಹಾಗಾಗಿ ಈಗ ನಿರ್ಮಿಸುವ ಹೊಸ ಮೇಲ್ಸೇತುವೆಗಳು ನಗರದ ಸಮಗ್ರ ಅಭಿವೃದ್ಧಿ, ಸುಗಮ ಸಂಚಾರಕ್ಕೆ ಪೂರಕವಾಗಿರುವಂತೆ ನೋಡಿ ಕೊಳ್ಳ ಬೇಕು ಎಂದು ಸಂಸದರು ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಅಬ್ದುಲ್ಲ ಜಾವೇದ್‌ ಅಜ್ಮಿಗೆ ಸೂಚಿಸಿದರು.

60 ಕೋಟಿ ರೂ. ವೆಚ್ಚದ ಪ್ರಸ್ತಾವಿತ ಮೇಲ್ಸೇತುವೆಗೆ ಸದ್ಯ ಪರಿಶಿಷ್ಟ ವಿದ್ಯಾರ್ಥಿಗಳ ಹಾಸ್ಟೆಲ್‌ ಕಾಂಪೌಂಡ್‌, ಮಲ್ಯ ಪ್ರತಿಮೆ ಇರುವ ಪಾರ್ಕ್‌, ಮಿಯಾವಾಕಿ ಉದ್ಯಾನವನ ಸಹಿತ ಕೆಲವೊಂದು ಅಡಚಣೆಗಳು ಬಾಕಿ ಇವೆ. ಇವುಗಳನ್ನು ಬಗೆಹರಿಸಿಕೊಂಡು ಆರಂಭದಲ್ಲಿ ನಂತೂರು ಜಂಕ್ಷನ್‌ನ ಮಧ್ಯದಲ್ಲಿ 2025ರ ಮಾರ್ಚ್‌ ವೇಳೆಗೆ ಓವರ್‌ಪಾಸ್‌ನ ಮಧ್ಯ ಭಾಗವನ್ನು ನಿರ್ಮಿಸಬಹುದು. ಆ ಬಳಿಕ ಇಕ್ಕೆಲಗಳ ಸರ್ವಿಸ್‌ ರಸ್ತೆ ಕಾಮಗಾರಿ 7 ಮೀಟರ್‌ ಅಗಲವಾಗಿ ಕೈಗೊಳ್ಳಲಾಗುವುದು. ಓವರ್‌ ಪಾಸ್‌ 9 ಮೀ. ಅಗಲ ಹೊಂದಿರಲಿದ್ದು, ಒಟ್ಟು ಕಾಮಗಾರಿ ಮುಗಿಯಲು 2 ವರ್ಷ ಬೇಕಾಗಬಹುದು ಎಂದರು.

ಸ್ಥಳೀಯ ಕಾರ್ಪೊರೇಟರ್‌ಗಳಾದ ಶಕೀಲಾ ಕಾವ ಹಾಗೂ ಮನೋಹರ್‌ ನೆರವಿನೊಂ ದಿಗೆ ಬಾಕಿ ಇರುವ ತೆರವು ಕಾರ್ಯ ಪೂರ್ಣಗೊಳಿಸುವಂತೆ ಸೂಚಿಸಲಾಯಿತು. ಈಗಾಗಲೇ ಹಾಕಿರುವ ಭೂಗತ ಕೇಬಲನ್ನು ಮತ್ತೆ ತೆರವು ಮಾಡಬೇಕಾಗುತ್ತದೆ. ಅದಕ್ಕಾಗಿ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಆದ್ಯತೆ ಮೇರೆಗೆ ಕೆಲಸ ನಡೆಸಿಕೊಡಬೇಕು ಎಂದರು.

Advertisement

ನಂತೂರಿಗೆ ಮೂರು ಸ್ತರಗಳ ಮೇಲ್ಸೇತುವೆ ವಿನ್ಯಾಸವನ್ನು ಖಾಸಗಿ ಯಾಗಿ ಕ್ರೆಡೈ ರಚಿಸಿದ್ದು, ಅಧ್ಯಕ್ಷ ವಿನೋದ್‌ ಪಿಂಟೋ ಅವರು ಪ್ರಸ್ತುತಪಡಿಸಿದ್ದು, ಕಾರ್ಯ ಸಾಧ್ಯತೆ ಬಗ್ಗೆ ಚರ್ಚಿಸಲಾಯಿತಾದರೂ ಅದು ಅಧಿಕ ವೆಚ್ಚದಾಯಕವಾಗಿರುವ ಕಾರಣ ಒಮ್ಮತ ವ್ಯಕ್ತವಾಗಲಿಲ್ಲ.

ಕುಡಿಯುವ ನೀರಿನ ಪೈಪ್‌ಲೈನ್‌ ಸ್ಥಳಾಂತರಕ್ಕೆ 2.5 ಕೋಟಿ ರೂ. ಪ್ರಸ್ತಾವನೆಯನ್ನು ಪಾಲಿಕೆ ಸಲ್ಲಿಸಿದೆ. ಆದರೆ ಅಷ್ಟು ಮೊತ್ತ ಒದಗಿಸುವಂತಿಲ್ಲ ಎಂದು ಎನ್‌ಎಚ್‌ಎಐ ಅಧಿಕಾರಿ ಆರಂಭದಲ್ಲಿ ತಿಳಿಸಿದರು. ಆ ವಿಷಯವನ್ನು ತ್ವರಿತವಾಗಿ ಬಗೆಹರಿಸಿ ಎಂದು ಶಾಸಕ ವೇದವ್ಯಾಸ ಕಾಮತ್‌ ಸೂಚಿಸಿದರು. ಡಿ.ಸಿ. ಮುಲ್ಲೆ$ç ಮುಗಿಲನ್‌, ಡಿಸಿಪಿ ದಿನೇಶ್‌ ಕುಮಾರ್‌, ವಿಶೇಷ ಭೂಸ್ವಾಧೀ ನಾಧಿಕಾರಿ ಇಸಾಕ್‌ ಇದ್ದರು.

ಹೆದ್ದಾರಿ ಸ್ಥಿತಿ ಸುಧಾರಣೆಗೆ ಆದ್ಯತೆ ಕೊಡಿ
ರಾಷ್ಟ್ರೀಯ ಹೆದ್ದಾರಿಯ ಅನೇಕ ಕಡೆ ಗುಂಡಿಗಳು, ನೀರು ನಿಲ್ಲುವುದು, ಸರಿಯಾದ ಎಚ್ಚರಿಕೆ ಫಲಕ, ಸೂಚನಾ ಫಲಕ ಹಾಕದಿರುವುದರಿಂದ ಸಮಸ್ಯೆಯಾಗುತ್ತಿದೆ. ಸಂಚಾರ ದಟ್ಟಣೆಗೆ ಕಾರಣವಾಗಿದ್ದು, ಇದನ್ನು ಸರಿಪಡಿಸಬೇಕು ಎಂದು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಅವರು ಎಚ್‌ಎಚ್‌ಎಐ ಅಧಿಕಾರಿಯ ಗಮನಕ್ಕೆ ತಂದರು.
ಬಿ.ಸಿ.ರೋಡ್‌ನಿಂದ ಸುರತ್ಕಲ್‌ ವರೆಗೆ ಹೆದ್ದಾರಿಯ ಬಾಕಿ ಉಳಿದ ಕೆಲಸಗಳು, ನಿರ್ವಹಣೆಗೆ ಆಗಬೇಕಾದ ಕಾರ್ಯಗಳು, ಅದರ ವೆಚ್ಚವನ್ನು ಪರಿಶೀಲಿಸಿ ಶೀಘ್ರ ನೀಡುವಂತೆಯೂ ಅಧಿಕಾರಿಗೆ ಸೂಚಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next