Advertisement

ರೈಲ್ವೆ ಯೋಜನೆ ಸಕಾಲದಲ್ಲಿ ಪೂರ್ಣಗೊಳಿಸಿ

11:04 PM Jun 07, 2019 | Lakshmi GovindaRaj |

ಹುಬ್ಬಳ್ಳಿ: ಕರ್ನಾಟಕದಲ್ಲಿ ಬಾಕಿ ಉಳಿದಿರುವ ರೈಲ್ವೆ ಯೋಜನೆ, ಕಾಮಗಾರಿಗಳ ಕುರಿತು ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ ಅಂಗಡಿ ಅವರು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

Advertisement

ನವದೆಹಲಿಯ ರೈಲ್ವೆ ಭವನದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ರೈಲ್ವೆ ಮಂಡಳಿ ಅಭಿಯಂತರ ಸದಸ್ಯ ವಿಶ್ವೇಶ ಚೌಬೆ ಹಾಗೂ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಪುಣೆ-ಮಿರಜ್‌-ಲೋಂಡಾ ಹಾಗೂ ಹುಬ್ಬಳ್ಳಿ-ದಾವಣಗೆರೆ-ತುಮಕೂರು ನಡುವೆ ಮಂಜೂರಾದ ರೈಲ್ವೆ ಜೋಡು ಮಾರ್ಗ ಕಾಮಗಾರಿ ಯಾವ ಹಂತದಲ್ಲಿದೆ ಎಂಬ ಮಾಹಿತಿ ಪಡೆದುಕೊಂಡರು.

ಅಲ್ಲದೆ, ಈ ಕಾಮಗಾರಿಗಳನ್ನು 2020ರೊಳಗೆ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯ ಹಾಗೂ ಕೇಂದ್ರ ಸಹಭಾಗಿತ್ವದ ಬೆಂಗಳೂರು ಉಪನಗರ ರೈಲ್ವೆ ಯೋಜನೆ ಯಾವ ಹಂತದಲ್ಲಿದೆ ಎಂದು ಮಾಹಿತಿ ಪಡೆದು, ಯೋಜನೆ ತ್ವರಿತ ಪೂರ್ಣಕ್ಕೆ ಸೂಚಿಸಿದರು.

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗ ಪ್ರಗತಿ ಕುರಿತು ಮಾಹಿತಿ ಪಡೆದ ಸಚಿವರು, ಅರಣ್ಯ ಇಲಾಖೆಯಿಂದ ಪರವಾನಗಿ ಸೇರಿ ಅಗತ್ಯ ಕ್ರಮ ಕೈಗೊಂಡು ಯೋಜನೆ ಪೂರ್ಣಕ್ಕೆ ಶ್ರಮಿಸುವಂತೆ ಸೂಚಿಸಿದರು. ಸಭೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಸಂಸದ ಪಿ.ಸಿ.ಮೋಹನ, ರೈಲ್ವೆ ಇಲಾಖೆಯ ಅಧಿಕಾರಿಗಳು ಇದ್ದರು ಎಂದು ನೈಋತ್ಯ ರೈಲ್ವೆ ವಲಯ ಕಚೇರಿ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next