Advertisement

ಸ್ಮಾರ್ಟ್‌ ಸಿಟಿ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳಿಸಿ

03:50 PM Jul 14, 2019 | Suhan S |

ಬೆಳಗಾವಿ: ಮಹಾನಗರ ಪಾಲಿಕೆ ನೂತನ ಆಯುಕ್ತ ಅಶೋಕ ದುಡಗುಂಟಿಯವರು ಶನಿವಾರ ನಗರ ಪ್ರದಕ್ಷಣೆ ಕೈಗೊಂಡು ಸ್ಮಾರ್ಟ್‌ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು.

Advertisement

ಗೋವಾವೇಸ್‌, ಟಿಳಕವಾಡಿಯ ಶುಕ್ರವಾರ ಪೇಟೆಯ ಸಿಸಿ ರಸ್ತೆ, ಕಲಾಮಂದಿರದ ವಾಣಿಜ್ಯ ಸಂಕೀರ್ಣ, ಟಿಳಕವಾಡಿ ತರಕಾರಿ ಮಾರುಕಟ್ಟೆ ಮೊದಲಾದ ಕಡೆ ಭೇಟಿ ನೀಡಿ ಅಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪರಿಶೀಲಿಸಿ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರಿಶೀಲನೆ ಸಮಯದಲ್ಲಿ ಕೆಲವು ಕಡೆ ಚರಂಡಿಗಳು ತುಂಬಿಕೊಂಡಿರುವದನ್ನು ಗಮನಿಸಿದ ಆಯುಕ್ತರು ಕೂಡಲೇ ಅವುಗಳನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಅಭಿಯಂತ ಲಕ್ಷ್ಮೀ ನಿಪ್ಪಾಣಿಕರ, ಸ್ಮಾರ್ಟ್‌ಸಿಟಿ ಯೋಜನೆಯ ಎಂಡಿ. ಕೃಷ್ಣಮೂರ್ತಿ, ಪರಿಸರ ಅಧಿಕಾರಿ ಉದಯಕುಮಾರ ತಳವಾರ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next