Advertisement

ಭದ್ರಾವತಿಯಲ್ಲಿ ಸಂಪೂರ್ಣ ಸ್ತಬ್ಧ

06:59 AM May 25, 2020 | Suhan S |

ಭದ್ರಾವತಿ: ಭಾನುವಾರ ಕೋವಿಡ್ 19  ಕರ್ಫ್ಯೂನಿಂದಾಗಿ ನಗರದಲ್ಲಿ ಎಲ್ಲಾ ವ್ಯಾಪಾರ- ವಹಿವಾಟು ಸಂಪೂರ್ಣವಾಗಿ ಸ್ಥಗಿತವಾಗಿತ್ತು.

Advertisement

ಔಷಧಾಲಯ, ಹಾಲು ಮಾರಾಟ ಕೇಂದ್ರ, ಮಾಂಸದಅಂಗಡಿಗಳನ್ನು ಹೊರತುಪಡಿಸಿದಂತೆ ಉಳಿದ ಎಲ್ಲಾ ಅಂಗಡಿ ಮುಂಗಟ್ಟುಗಳು, ಹೊಟೇಲ್‌ಗ‌ಳು, ಮದ್ಯ ಮಾರಾಟ ಅಂಗಡಿಗಳು ಶನಿವಾರ ಸಂಜೆಯಿಂದಲೇ ಮುಚ್ಚಲ್ಪಟ್ಟಿದ್ದವು. ಆಟೋ, ಕೆಎಸ್‌ಆರ್‌ಟಿಸಿ ಬಸ್‌, ಶಿವಮೊಗ್ಗಕ್ಕೆ ಸಂಚರಿಸುವ ಟೆಂಪೋ ಟ್ರಾಫಿಕ್ಸ್‌ ಸೇರಿದಂತೆ ಎಲ್ಲಾ ವಾಹನಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದವು. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಬಸ್‌ ಹಾಗೂ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು.

ರೈಲ್ವೆ ನಿಲ್ದಾಣದಲ್ಲಿ ಸಹ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿರಲಿಲ್ಲ. ರೈಲ್ವೆ ನಿಲ್ದಾಣದಲ್ಲಿ ಕೆಲಸಗಾರರು ಫ್ಲ್ಯಾಟ್‌ಫಾರಂ ಅನ್ನು ಸ್ವತ್ಛಗೊಳಿಸುವಲ್ಲಿ ಮಗ್ನರಾಗಿದ್ದರು. ಮುಖ್ಯರಸ್ತೆಯಲ್ಲಿ ಅನಗತ್ಯವಾಗಿ ಬೈಕ್‌,ಸ್ಕೂಟರ್‌ಗಳಲ್ಲಿ ಸಂಚರಿಸುತ್ತಿದ್ದವರನ್ನು ಪೊಲೀಸರು ಹಿಡಿದು ಪ್ರಕರಣ ದಾಖಲಿಸುವ ಬೆದರಿಕೆ ಹಾಕಿ ಅವರನ್ನು ಮನೆಗೆ ಹಿಂದಿರುಗುವಂತೆ ಮಾಡುತ್ತಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next