Advertisement

ಸಂಸ್ಕೃತ ಕಲೋತ್ಸವದಲ್ಲಿ ಸಮಗ್ರ ಪ್ರಶಸ್ತಿ

12:54 AM Nov 08, 2019 | Team Udayavani |

ಕಾಸರಗೋಡು: ಪೈವಳಿಕೆ ನಗರ ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಕಲೋತ್ಸವದ ಸಂಸ್ಕೃತ ಕಲೋತ್ಸವದಲ್ಲಿ ಧರ್ಮತ್ತಡ್ಕ ಶ್ರೀ ದುರ್ಗಾ ಪರಮೇಶ್ವರಿ ಪ್ರೌಢಶಾಲೆ ಈ ಬಾರಿಯೂ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

Advertisement

ಕಲೋತ್ಸವದ ಜನರಲ್‌ ವಿಭಾಗದಲ್ಲಿ ದ್ವಿತೀಯ ಸ್ಥಾನ ಈ ಶಾಲೆಗೆ ಲಭಿಸಿದೆ.
ಕಲೋತ್ಸವದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕ ಶಂಕರನಾರಾಯಣ ಭಟ್‌, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ರೇವತಿ, ಮುಖ್ಯೋಪಾಧ್ಯಾಯ ಇ.ಎಚ್‌.ಗೋವಿಂದ ಭಟ್‌, ಶಾಲೆಯ ಅಧ್ಯಾಪಕ-ಅಧ್ಯಾಪಕೇತರ ಸಿಬಂದಿ ಅಭಿನಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next