Advertisement

ಮಾನಹಾನಿ ಪ್ರಕರಣ ದಾಖಲಿಸಲು ಒತ್ತಾಯ

05:21 PM Aug 18, 2022 | Team Udayavani |

ಚಿಂಚೋಳಿ: ಪರಿಶಿಷ್ಟ ಜಾತಿ ಸಮು ದಾಯಕ್ಕೆ ಸೇರಿದ ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಕುಟುಂಬದ ಸಹೋದರಿಯರ ಬಗ್ಗೆ ಅಸಂವಿಧಾನಿಕ ಪದಗಳನ್ನು ಬಳಸಿದ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.

Advertisement

ತೇಲ್ಕೂರ ಅವರು ಚಿತ್ತಾಪುರ ಶಾಸಕ ಪ್ರಿಯಾಂಕ್‌ ಖರ್ಗೆ ಅವರ ಸಹೋದರಿಯರ ಬಗ್ಗೆ ಅಸಂವಿಧಾನಿಕ ಪದ ಬಳಸಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನಾಂಗಕ್ಕೆ ಅವಮಾನ ಮಾಡಿದ್ದಾರೆ. ಕೂಡಲೇ ಅವರ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಬೇಕೆಂದು ದಲಿತ ಮುಖಂಡರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪುರಸಭೆ ಸದಸ್ಯ ಆನಂದ ಟೈಗರ್‌, ಗೋಪಾಲ ರಾಂಪುರೆ, ಸಂತೋಷ ಗುತ್ತೇದಾರ, ಪಾಂಡುರಂಗ ಲೊಡನೋರ, ಕಾಶಿನಾಥ ಸಿಂಧೆ, ರಾಜಕುಮಾರ ಹೊಸಮನಿ, ಓಮನರಾವ್‌ ಕೊರವಿ, ನಾಗಾರ್ಜುನ ಕಟ್ಟಿ, ರಾಜಶೇಖರ ಮೌರ್ಯ, ಶಶಿಕುಮಾರ ಮೇತ್ರಿ, ಸತೀಶ ಹೊಸಳ್ಳಿ, ಸುರೇಶ ಬಳಂಕರ ಇನ್ನಿತರರಿದ್ದರು. ಆನಂತರ ಪ್ರತಿಭಟನಾಕಾರರು ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ತಹಶೀಲ್ದಾರ್‌ ಅಂಜುಮ ತಬಸುಮಗೆ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next