Advertisement

ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ವಿತರಣೆ

12:21 PM Jun 27, 2020 | Suhan S |

ಜಮಖಂಡಿ: ಗಣಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಸಂಸ್ಥೆ ಮುಖ್ಯಸ್ಥ ಮಲ್ಲಿಕಾರ್ಜುನ ಬಡಚಿ ಹೇಳಿದರು.

Advertisement

ನಗರದ ಕಾಡಸಿದ್ದೇಶ್ವರ ಕಾಲೋನಿಯ ಕರ್ನಾಟಕ ಗಣಕಯಂತ್ರ ಶಾಲೆಯಲ್ಲಿ ನಡೆದ ಗಣಕ ಯಂತ್ರ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಪ್ರಸಕ್ತ ವರ್ಷದಲ್ಲಿ ಪ್ರಥಮ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿನಿಯರಿಗೆ ತಲಾ ಒಂದು ಕಂಪ್ಯೂಟರ್‌ ನೀಡಲಾಗಿದೆ. ಪರೀಕ್ಷೆಯಲ್ಲಿ ಪ್ರಥಮ, ದ್ವಿತಿಯ, ತೃತಿಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ನೀಡಲಾಗುವುದು ಎಂದರು. ಸಾಹಿತಿ ಮಲ್ಲಿಕಾರ್ಜುನ ಇಂಡಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಕಂಪ್ಯೂಟರ್‌ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಸ್ನೇಹಾ ಬಡಿಗೇರ ಮತ್ತು ಐಶ್ವರ್ಯಾ ದೇವಾಡಿಗ ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ನೀಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next