Advertisement

ಅಧಿಕಾರಿಗಳ ಮೇಲೆ ಹಲ್ಲೆಗೆ ಖಂಡನೆ

03:15 PM Feb 18, 2022 | Team Udayavani |

ಯಡ್ರಾಮಿ: ಚಳ್ಳಕೆರೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮೇಲೆ ಹಲ್ಲೆ ಮಾಡಿರುವ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿ, ತಾಲೂಕು ನೌಕರರ ಸಂಘದ ವತಿಯಿಂದ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

Advertisement

ಈ ವೇಳೆ ತಾಲೂಕು ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಬಲವಂತ್ರಾಯ ಬಿರಾದಾರ ಮಾತನಾಡಿ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಪಂ ಅಧಿಕಾರಿ ಮೇಲೆ ಹಲ್ಲೆ ನಡೆದಿರುವುದು ಖಂಡನೀಯವಾಗಿದೆ. ಆದ್ದರಿಂದ ತಪ್ಪಿತಸ್ಥರಿಗೆ ಕಠಿಣ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.

ನೌಕರರ ಸಂಘದ ಕಾರ್ಯದರ್ಶಿ ಭೀಮರಾಯ ಬಿಳವಾರ, ಖಜಾಂಚಿ ನಾಗೇಂದ್ರ ಗುಂಡಗುರ್ತಿ, ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಕೋನಶಿರಸಗಿ, ಜಿಲ್ಲಾ ಉಪಾಧ್ಯಕ್ಷ ಶಿವುಕುಮಾರ ಡಂಬಳ, ಬಸವರಾಜ ಪಾಟೀಲ, ನಿಂಗನಗೌಡ ದೋರನಹಳ್ಳಿ, ಶ್ರೀಶೈಲ ಬಿರಾದಾರ, ಉಮೇಶ, ಸತೀಶ ರಾಠೊಡ, ನಾಗೇಂದ್ರಪ್ಪ ಪಾಟೀಲ, ಮಹಾಲಿಂಗಯ್ಯ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next