Advertisement

ವೈದ್ಯರ ಮೇಲಿನ ಹಲ್ಲೆಗೆ ಖಂಡನೆ

06:03 AM May 22, 2020 | Suhan S |

ನಿಡಗುಂದಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ| ವಿವೇಕಾನಂದ ಹೂವಿನಹಳ್ಳಿ ಅವರ ಮೇಲೆ ರೋಗಿಯೊಬ್ಬರ ಸಂಬಂಧಿನಡೆಸಿರುವ ಹಲ್ಲೆ ಘಟನೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಖಂಡಿಸಿದೆ. ಘಟನೆ ಖಂಡಿಸಿ ಸಂಘದ ಪದಾಧಿಕಾರಿಗಳು ಬಸವನಬಾಗೇವಾಡಿ ಡಿವೈಎಸ್‌ಪಿ, ನಿಡಗುಂದಿ ತಹಶೀಲ್ದಾರ್‌, ಪಿಎಸ್‌ಐ, ವೈದ್ಯಾಧಿ ಕಾರಿ ಸೇರಿದಂತೆ ವಿವಿಧ ಅಧಿಕಾರಿಗಳಿಗೆ ಗುರುವಾರ ಮನವಿ ಸಲ್ಲಿಸಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿದರು.

Advertisement

ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಟಿ. ಗೌಡರ, ನೌಕರರ ಸಂಘದ ನಿಡಗುಂದಿ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಬಿ. ರಕರೆಡ್ಡಿ ಮಾತನಾಡಿ, “ಕೋವಿಡ್ ದಂತಹ ಸಂದಿಗ್ಧ ಸಮಯದಲ್ಲಿಯೂ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ. ಇದರಿಂದ ನೌಕರರಿಗೆ ಕೆಲಸ ಮಾಡುವ ಮನೋಸ್ಥೈರ್ಯ ಕುಸಿಯುತ್ತದೆ, ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು, ನಿರ್ಭಯವಾಗಿ ಕೆಲಸ ನಿರ್ವಹಿಸಲು ಸೂಕ್ತ ರಕ್ಷಣೆ ನೀಡಬೇಕು’ ಎಂದು ಮನವಿ ಮಾಡಿದರು.

ಬಸವನಬಾಗೇವಾಡಿ ತಹಶೀಲ್ದಾರ್‌ ಶಿವಲಿಂಗಪ್ರಭು ವಾಲಿ, ಡಿವೈಎಸ್‌ಪಿ ಈ. ಶಾಂತವೀರ, ಪಿಎಸ್‌ಐ ಸಿ.ಬಿ. ಚಿಕ್ಕೋಡಿ, ಆರೋಗ್ಯಾಧಿಕಾರಿ ಡಾ| ಪ್ರಕಾಶ ಅವರಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದರು. ಕುಮಾರ ಬಾಗೇವಾಡಿ, ಸಲೀಂ ದಡೆದ, ಆರ್‌.ಎಸ್. ಕಮತ, ಎಂ.ಎಂ. ಮುಲ್ಲಾ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next