Advertisement

ಶಿವಸೇನೆ,ಎಂಇಎಸ್‌ ಧೋರಣೆಗೆ ಖಂಡನೆ

12:47 PM Jan 08, 2020 | Suhan S |

ದೊಡ್ಡಬಳ್ಳಾಪುರ; ಅನಗತ್ಯವಾಗಿ ಗಡ ವಿವಾದ, ಕನ್ನಡಿಗರನ್ನು ಕೆಣಕಿ, ನಾಡಧ್ವಜವನ್ನು ಸುಟ್ಟು ಕೋಮು ಸೌಹಾರ್ದ ಕದಡುತ್ತಿರುವ ಶಿವಸೇನೆ ಹಾಗೂ ಎಂಇಎಸ್‌ ಧೋರಣೆ ಖಂಡಿಸಿ, ಭುವನೇಶ್ವರಿ ಕನ್ನಡ ಸಂಘದ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳಿಂದ ನಗರದ ಸಿದ್ಧಲಿಂಗಯ್ಯ ವೃತ್ತದಲ್ಲಿ ಪಂಜು ಹಚ್ಚಿ ಪ್ರತಿಭಟನೆ ನಡೆಸಲಾಯಿತು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಭುವನೇಶ್ವರಿ ಕನ್ನಡ ಸಂಘದ ಸಲಹೆಗಾರ, ಟಿ.ಎನ್‌.ಪ್ರಭುದೇವ್‌, ಮಹಾರಾಷ್ಟ್ರದ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾಜನ್‌ ವರದಿಯೇ ಅಂತಿಮವಾಗಿದೆ. ಆದರೆ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಬವ್‌ ಠಾಕ್ರೆ, ಕನ್ನಡದ ಪ್ರದೇಶಗಳಾದ ಬೆಳಗಾವಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರದಲ್ಲಿದೆ ಎಂದು ಹೇಳಿ ಕನ್ನಡಿಗರನ್ನು ಕೆರಳಿಸಿದ್ದಾರೆ. ಶಾಸಕರಮೇಶ್‌ ಜಾರಕಿಹೊಳಿ ಬೆಳಗಾವಿ ಗ್ರಾಮಾಂತರದಲ್ಲಿ ಎಂಇಎಸ್‌ ರವರೇ ಶಾಸಕರಾಗಿ ಆಯ್ಕೆಯಾಗಬೇಕು ಎಂದಿರುವುದು ಖಂಡನೀಯ. ದೇಶದ ಒಕ್ಕೂಟ

ವ್ಯವಸ್ಥೆಯ ಮೂಲ ಉದ್ದೇಶಗಳನ್ನು ಬುಡಮೇಲು ಮಾಡುತ್ತಿರುವವ ಶಿವಸೇನೆ ಹಾಗೂ ಎಂಇಎಸ್‌ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಬೇಕೆಂದು ಒತ್ತಾಯಿಸಿದರು. ತಾಲೂಕು ಡಾ.ರಾಜ್‌ಕುಮಾರ್‌ ಅಭಿ ಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂ ಹಮೂರ್ತಿ ಮಾತನಾಡಿ, ಕನ್ನಡಿಗರು ಶಾಂತಿ ಪ್ರಿಯರು,ಸಹಿಷ್ಣುಗಳು ಆದರೆ ಗಡಿ ಭಾಗಗಳಲ್ಲಿರುವ ರಾಜ್ಯಗಳು ವಿನಾಕಾರಣ ಸದಾ ಒಂದಿಲ್ಲೊಂದು ವಿಚಾರವನ್ನು ಕೆದಕಿ ಕನ್ನಡಿಗರ ಮೇಲೆ ಆಕ್ರಮಣ ಮಾಡುತ್ತಾ ಸಮ್ಮ ಸಹನೆಯನ್ನು ಕೆಣಕುತ್ತಿರುತ್ತಾರೆ.ಇತ್ತೀಚೆಗಷ್ಟೆ ಮಹಾರಾಷ್ಟ್ರದಲ್ಲಿ ನಮ್ಮ ನಾಡ ಧ್ವಜವನ್ನು ಸುಟ್ಟು ಕನ್ನಡಿಗರ ಪ್ರತಿನಿಧಿಯಾದ ಮುಖ್ಯಮಂತ್ರಿಗಳ ಪ್ರತಿಕೃತಿ ದಹಿಸಲ್ಲದೆ ಗಡಿ ಭಾಗಗಳ್ಳಿ ಕನ್ನಡ ಚಲನಚಿತ್ರದ ಪ್ರದರ್ಶನ ಕೂಡ ನಿಲ್ಲಿಸಿ ನಾಮಫಲಕಗಳಿಗೆ ಮಸಿ ಬಳಿದು ಕನ್ನಡಿಗರ ಸ್ವಾಭಿಮಾನವನ್ನು ಕೆಣಕ್ಕಿದ್ದಾರೆ. ಕರ್ನಾಟಕ ಕಾಂಗ್ರೆಸ್‌ ಪಕ್ಷ ಕೇಂದ್ರದ ಹೆ„ಕಮಾಂಡ್‌ ಮೇಲೆ ಒತ್ತಡ ಏರಿ ಶಿವಸೇನೆ ನೀಡಿರುವ ಬೆಂಬಲವನ್ನು ಹಿಂಪಡೆದು ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ನೀಡಬೇಕಿದೆ. ತಮಿಳುನಾಡಿನಲ್ಲಿ ಕನ್ನಡ ಬಾವುಟ ವಾಹನದ ಮೇಲೆ ಕಟ್ಟಿದ್ದಕ್ಕೆ ವಾಹನ ಚಾಲಕನ ಮೇಲೆ ಹಲ್ಲೆ ನಡೆಸಿರುವುದು ಸಹ ಖಂಡನೀಯ,ಶಾಂತಿ ಮಂತ್ರ ಜಪಿಸುತ್ತೇವೆ ಎಂಬ ಕಾರಣಕ್ಕೆ ನಾವುಗಳು ಕೈಲಾಗದವರಲ್ಲ. ಮತ್ತೆ ಇಂತಹ ಘಟನೆಗಳು ಕಂಡು ಬಂದಲ್ಲಿ ಪರಿಣಾಮ ಎದುರಿಸಬೇಕಾಗುವುದೆಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ನಗರಸಭೆ ಮಾಜಿ ಸದಸ್ಯ ಜಿ.ಸತ್ಯನಾರಾಯಣ್‌, ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ಪಿ.ನವೀನ್‌, ಗೌ.ಅಧ್ಯಕ್ಷ ಪುಟ್ಟಪ್ಪ, ಕಾರ್ಯದರ್ಶಿ ಸು.ವೆಂಕಟೇಶ್‌, ಕರವೇ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ, ತಾಲೂಕು ಗೌರವಾಧ್ಯಕ್ಷ ಪು.ಮಹೇಶ್,ಮಲ್ಲಾತಹಳ್ಳಿ ಆನಂದ್‌, ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಂಜಪ್ಪ, ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆ ಅಧ್ಯಕ್ಷ ಚಂದ್ರಪ್ಪ, ಕನ್ನಡ ಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ನಾಗರಾಜ್‌ ಮತ್ತಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next