Advertisement

ಚೆನ್ನಿಗಪ್ಪ, ಚತುರ್ವೇದಿ, ಷ. ಶೆಟ್ಟರ್‌ಗೆ ಶ್ರದ್ಧಾಂಜಲಿ

11:19 PM Mar 02, 2020 | Lakshmi GovindaRaj |

ವಿಧಾನಸಭೆ: ಮಾಜಿ ಸಚಿವ ಸಿ. ಚೆನ್ನಿಗಪ್ಪ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಸುಧಾಕರ ಚತುರ್ವೇದಿ, ಹಿರಿಯ ಸಂಶೋಧಕರ ಷ. ಶೆಟ್ಟರ್‌ ಅವರಿಗೆ ಸದನದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸದನ ಆರಂಭವಾಗುತ್ತಿದ್ದಂತೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ ನಿರ್ಣಯ ಮಂಡಿಸಿದರು.

Advertisement

ಸಿಎಂ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಎಚ್‌.ಕೆ.ಪಾಟೀಲ್‌, ಜೆ.ಸಿ.ಮಾಧುಸ್ವಾಮಿ, ಡಾ.ಅನ್ನದಾನಿ, ಶಿವಲಿಂಗೇಗೌಡ ಅವರು ಮಾತನಾಡಿದರು. ಸಿ.ಚೆನ್ನಿಗಪ್ಪ ಅವರು ಸತತ ಮೂರು ಬಾರಿ ಶಾಸಕರಾಗಿ ಗೆಲುವು ಸಾಧಿಸಿ ಕೊರಟಗೆರೆ ಕ್ಷೇತ್ರದ ಜನರ ಪ್ರೀತಿಗೆ ಪಾತ್ರರಾಗಿ ಸಚಿವರಾಗಿ ನಾಡಿಗೆ ಸೇವೆ ಸಲ್ಲಿಸಿದ್ದಾರೆ. ಶಿಕ್ಷಣ ಸಂಸ್ಥೆ ಸ್ಥಾಪಿಸಿ ಶಿಕ್ಷಣ ಕ್ಷೇತ್ರಕ್ಕೂ ಕೊಡುಗೆ ನೀಡಿದ್ದರು. ಸಿದ್ಧಗಂಗಾ ಶ್ರೀಗಳ ಬಗ್ಗೆ ಅಪಾರ ಗೌರವ ಹೊಂದಿದ್ದರು ಎಂದು ಸ್ಮರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next