Advertisement

ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ನಡೆಸುವುದು ಬೇಡ: ಸಚಿವರಿಗೆ ಎಸ್ ಜಿ ಸಿದ್ದರಾಮಯ್ಯ ಪತ್ರ

04:30 PM May 25, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಸದ್ಯ ಕೋವಿಡ್-19 ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಇಂಥಹ ಪರಿಸ್ಥಿತಿಯಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ನಡೆಸುವುದು ಸುರಕ್ಷಿತವಲ್ಲ ಎಂದು ಶಿಕ್ಷಣ ತಜ್ಞ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್ ಜಿ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

Advertisement

ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಪತ್ರ ಬರೆದಿರುವ ಅವರು, ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಕೋವಿಡ್-19 ಸೋಂಕು ನಿಯಂತ್ರಣದಲ್ಲಿತ್ತು. ಮುಂಬೈನಿಂದ, ವಿದೇಶಗಳಿಂದ ಜನರು ವಾಪಾಸ್ಸು ಬಂದಿರಲಿಲ್ಲ. ಆಗ ಪರಿಸ್ಥಿತಿ ಹತೋಟಿಯಲ್ಲಿತ್ತು. ಹಾಗಾಗಿ ಸೂಕ್ತ ಪೂರ್ವಸಿದ್ದತೆಯೊಂದಿಗೆ ಪರೀಕ್ಷೆ ನಡೆಸಬಹುದು ಎಂದು ನಾವು ಸಲಹೆ ನೀಡಿದ್ದೆವು. ಆದರೆ ಈಗಿನ ಪರಿಸ್ಥಿತಿಯಲ್ಲಿ ಯಾವ ಕಾರಣಕ್ಕೂ ಪರೀಕ್ಷೆ ನಡೆಸುವುದು ಬೇಡ ಎಂದಿದ್ದಾರೆ.

ಮಕ್ಕಳ ಜೀವನದ ದೃಷ್ಟಿಯಿಂದ ಅವರ ಜೀವದ ಜೊತೆ ಈ ಆಪತ್ತಿಗೆ ಆಹ್ವಾನ ನೀಡುವುದು ಅಮಾನವೀಯ ನಡೆಯಾಗುತ್ತದೆ. ಆದ್ದರಿಂದ ಸದ್ಯ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ಅವರು ಒತ್ತಾಯಿಸಿದ್ದಾರೆ.

ಕೋವಿಡ್-19 ಕಾರಣದಿಂದ ಮುಂದೂಡಲಾಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜೂನ್ 25ರಿಂದ ನಡೆಸಲು ಸರಕಾರ ನಿರ್ಧರಿಸಿದೆ. ಬಾಕಿ ಉಳಿದಿರುವ ಪಿಯುಸಿಯ ಒಂದು ಪರೀಕ್ಷೆ ಜೂನ್ 18ರಂದು ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next