Advertisement

CM: 536ನೇ ಶ್ರೀ ಕನಕ ಜಯಂತ್ಯೋತ್ಸವ, ಭಾವೈಕ್ಯತಾ ಸಮಾವೇಶ ಉದ್ಘಾಟಿಸಿದ ಸಿ.ಎಂ. ಸಿದ್ದರಾಮಯ್ಯ

03:36 PM Nov 29, 2023 | Team Udayavani |

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ,  ಶ್ರೀ‌ ಕಾಗಿನೆಲೆ ಮಹಾಸಂಸ್ಥಾನ ಕನಕ‌ ಗುರುಪೀಠದಲ್ಲಿ ಏರ್ಪಡಿಸಿರುವ 536ನೇ ಶ್ರೀ ಕನಕ ಜಯಂತ್ಯೋತ್ಸವ, ಭಾವೈಕ್ಯತಾ ಸಮಾವೇಶ ಉದ್ಘಾಟಿಸಿದರು.

Advertisement

ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ರೇವಣಸಿದ್ದೇಶ್ವರ, ಶ್ರೀ ಬೀರಲಿಂಗೇಶ್ವರ, ಶ್ರೀ ಮೈಲಾರಲಿಂಗೇಶ್ವರ, ಶ್ರೀ ಮಹಾಸಿದ್ದೇಶ್ವರಿ ದೇವರುಗಳ ಕುಂಭಾಭಿಷೇಕ ನೆರವೇರಿಸಿದರು.

ಹುಬ್ಬಳ್ಳಿ, ಮೂರು ಸಾವಿರ ಮಠದ ಶ್ರೀಮನ್ ಮಹಾರಾಜ ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳು, ಹಜರತ್ ಬಿಜಾಪುರದ ಹಾಶಿಮ್ ಪೀರ್ ದರ್ಗಾದ ಸೈಯ್ಯದ್ ಮೊಹಮ್ಮದ್ ತನ್ವೀರ್ ಹಾಶ್ಮಿ, ಕರ್ನಾಟಕ ಧರ್ಮಪ್ರಾಂತ್ಯದ ಧರ್ಮಗುರು ಡಾ.ಫಾ.ಅಲ್ಫೋನ್ಸ್ ಫರ್ನಾಂಡೀಸ್ ಯೇಸ ದಿವ್ಯ ಸಾನ್ನಿಧ್ಯ ವಹಿಸಿದ್ದರು.

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್, ಪ್ರಾಥಮಿಕ‌ ಶಿಕ್ಷಣ ಸಚಿವ ಮಧು ಬಂಗಾರಪ್ಪ,  ವಿಧಾನಸಭೆಯ ಉಪಸಭಾಪತಿ ರುದ್ರಪ್ಪ ಲಮಾಣಿ, ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಹೊಸದುರ್ಗ ಶಾಸಕರಾದ ಬಿ.ಜಿ.ಗೋವಿಂದಪ್ಪ, ಹಿರೇಕೆರೂರು ಶಾಸಕ ಯು.ಬಿ.ಬಣಕಾರ್, ರಾಣೆಬೆನ್ನೂರು ಶಾಸಕರಾದ ಪ್ರಕಾಶ್ ಕೋಳಿವಾಡ, ಹಾನಗಲ್ ಶಾಸಕರಾದ ಶ್ರೀನಿವಾಸ್ ಮಾನೆ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next