Advertisement

ಅಧಿವೇಶನದಲ್ಲಿ ಧರಣಿ ಖಚಿತ: ರಘು ಆಚಾರ್‌ 

06:35 AM Nov 16, 2018 | Team Udayavani |

ಚಿತ್ರದುರ್ಗ: ಜನಪ್ರತಿನಿಧಿಗಳು ಹಾಗೂ ನೌಕರರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಯಲ್ಲೇ ಓದಬೇಕೆಂಬ ಖಾಸಗಿ ಕಾಯ್ದೆ ಅನುಷ್ಠಾನಕ್ಕೆಆಗ್ರಹಿಸಿ ಚಳಿಗಾಲದ ಅಧಿವೇಶನದಲ್ಲಿ ಧರಣಿ ನಡೆಸುವೆ ಎಂದು ವಿಧಾನ ಪರಿಷತ್‌ ಸದಸ್ಯ ರಘು ಆಚಾರ್ ತಿಳಿಸಿದ್ದಾರೆ.

Advertisement

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಕಾಂಗ್ರೆಸ್‌ ಸರ್ಕಾರ ಇದ್ದಾಗ ಧರಣಿ ಮಾಡಲು ಸಿದ್ಧತೆ ಮಾಡಿಕೊಂಡಿದ್ದೆ. ಆದರೆ, ಕೌಟುಂಬಿಕ ಸಮಸ್ಯೆಗಳಿಂದಾಗಿ ಸಾಧ್ಯವಾಗಿರಲಿಲ್ಲ. ಆದರೆ, ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ಧರಣಿ ನಡೆಸುವುದು ಖಚಿತ ಎಂದರು.

ಮುಂಬರುವ ವಿಧಾನಪರಿಷತ್‌ ಚುನಾವಣೆ ಸೇರಿದಂತೆ ಇನ್ನು 10 ವರ್ಷ ಯಾವುದೇ ಚುನಾವಣೆಗೆ ಸ್ಪರ್ಧಿಸಲ್ಲ. ವೈಯಕ್ತಿಕ
ಕಾರಣಗಳಿಂದ ಚುನಾವಣಾ ರಾಜಕೀಯದಿಂದ ದೂರ ಉಳಿಯಲಿದ್ದು, ಕಾಂಗ್ರೆಸ್‌ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next