Advertisement

Conflict: ಮಣಿಪುರದಲ್ಲಿ ಹಿಂಸೆ: ಗ್ರಾಮ ಮುಖ್ಯಸ್ಥನ ಮನೆಗೆ ಬೆಂಕಿ

12:59 AM Oct 21, 2024 | Team Udayavani |

ಇಂಫಾಲ್‌: ಮಣಿಪುರದ ಜಿರೀಬಾಮ್‌ ಜಿಲ್ಲೆಯ ಗ್ರಾಮವೊಂದರ ಮುಖ್ಯಸ್ಥರೊಬ್ಬರಿಗೆ ಸೇರಿದ 2 ತೋಟದ ಮನೆಗಳಿಗೆ ಶಂಕಿತ ಉಗ್ರರು ಬೆಂಕಿ ಹಚ್ಚಿದ್ದಾರೆ. ಶನಿವಾರ ತಡರಾತ್ರಿ ಈ ಘಟನೆ ನಡೆದಿದ್ದು, ಭದ್ರತಾ ಪಡೆಗಳು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ.

Advertisement

ಶನಿವಾರ ಇನ್ನೊಂದು ಗ್ರಾಮದ ಮೇಲೆ ಉಗ್ರರು ಬಾಂಬ್‌ ದಾಳಿ ನಡೆಸಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ ನಡೆಸಿದ್ದರು. ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳುವ ಸಲುವಾಗಿ ನವದೆಹಲಿಯಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಕ್ಕೆ ಸೇರಿದ ಶಾಸಕರ ಸಭೆ ನಡೆದ ಬೆನ್ನಲ್ಲಿಯೇ ಈ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next