Advertisement

ಅಧಿಕಾರಿಗಳ ಎಡವಟ್ಟು: ಬಿಳಿನೆಲೆ ಗೋಪಾಲಕೃಷ್ಣ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಗೊಂದಲ

02:31 PM Dec 27, 2020 | keerthan |

ಕಡಬ: ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಮತದಾರರ ಪಟ್ಟಿಯಲ್ಲಿ ಕೆಲವು ಮತದಾರರ ಹೆಸರಿಲ್ಲ ಎನ್ನುವ ವಿಚಾರವು ಗೊಂದಲಕ್ಕೆ ಕಾರಣವಾಯಿತು.

Advertisement

ಅಭ್ಯರ್ಥಿಗಳ ಬೆಂಬಲಿಗರು ಮತಗಟ್ಟೆಯ ಆವರಣದೊಳಗೆ ಬಂದು ಮತಗಟ್ಟೆ ಅಧಿಕಾರಿಯೊಂದಿಗೆ ಮಾತಿನ ಚಕಮಕಿ ನಡೆಸಿದರು.

ಇದನ್ನೂ ಓದಿ:ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಸ್ ಚಾಲಕ ಆತ್ಮಹತ್ಯೆ!

ಸುದ್ದಿ ತಿಳಿದ ಕಡಬ ತಹಸೀಲ್ದಾರ್ ಅನಂತ ಶಂಕರ್ ಅವರು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿದರು. ವಾರ್ಡ್ ವಿಂಗಡಣೆ ಸಂದರ್ಭ ಮತ ಪಟ್ಟಿ ಪರಿಷ್ಕರಣೆ ಮಾಡಿ ಕೆಲವು ಮತದಾರರ ಹೆಸರನ್ನು ಇನ್ನೊಂದು ವಾರ್ಡ್ ಗೆ ಸೇರಿಸಲಾಗಿತ್ತು. ಆದರೆ ಆ ವಿಚಾರವನ್ನು ಮತದಾರರಿಗೆ ಮನದಟ್ಟು ಮಾಡುವಲ್ಲಿ ಅಧಿಕಾರಿಗಳು ವಿಫಲರಾದುದು ಗೊಂದಲಕ್ಕೆ ಕಾರಣವಾಯಿತು. ಘಟನೆಯಿಂದಾಗಿ ಹೆಚ್ಚುವರಿ ಪೊಲೀಸ್ ಪಡೆಯನ್ನು ಸ್ಥಳಕ್ಕೆ ಕರೆಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next