Advertisement

ರೆಬಲ್‌ಸ್ಟಾರ್‌ ಸ್ಪರ್ಧೆ ಬಗ್ಗೆ ಮುಗಿಯದ ಗೊಂದಲ

12:21 PM Apr 22, 2018 | Team Udayavani |

ಬೆಂಗಳೂರು: ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಅಂಬರೀಶ್‌ಗೆ ಟಿಕೆಟ್‌ ನೀಡಿದ್ದರೂ ಸ್ಪರ್ಧೆಗೆ ಹಿಂದೇಟು ಹಾಕುತಿದ್ದು, ಈ  ಕುರಿತು ಅಂಬರೀಶ್‌ ಆಪ್ತ ಅಮರಾವತಿ ಚಂದ್ರಶೇಖರ್‌ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸುದೀರ್ಘ‌ ಚರ್ಚೆ ನಡೆಸಿದರು.

Advertisement

ಆದರೆ,  ಸಭೆಯಲ್ಲಿ ಯಾವುದೇ ಅಂತಿಮ ತೀರ್ಮಾನವಾಗಿಲ್ಲ. ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಪ್ರವಾಸದಲ್ಲಿ ಇರಲಿದ್ದು, ಅಲ್ಲಿಯೇ  ಅಂಬರೀಶ್‌ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಅಲ್ಲಿಯೇ ಸ್ಪರ್ಧೆ ತೀರ್ಮಾನವಾಗಲಿದೆ. 

ತಮ್ಮ ಆರೋಗ್ಯ ಸರಿಯಾಗಿಲ್ಲ ಎಂದು ತಮ್ಮನ್ನು  ಹೇಳದೇ ಕೇಳದೇ ಸಂಪುಟದಿಂದ ಕೈ ಬಿಟ್ಟಿದ್ದು, ಅಂಬರೀಶ್‌ ಮುನಿಸಿಗೆ  ಕಾರಣವಾಗಿದೆ ಎಂದು ಅಂಬರೀಶ್‌ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಅಂಬರೀಶ್‌ ಆಪ್ತ ಅಮರಾವತಿ ಚಂದ್ರಶೇಖರ್‌ ಸೋಮವಾರ ಅಥವಾ ಮಂಗಳವಾರ ನಾಮಪತ್ರಸಲ್ಲಿಸಲಿದ್ದಾರೆ ಎಂದಿದ್ದಾರೆ. ಇನ್ನೊಂದೆಡೆ ಮಂಡ್ಯದಲ್ಲಿ ಮಾಜಿ ಶಾಸಕ  ಎಚ್‌.ಬಿ. ರಾಮು ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿದೆ.  

Advertisement

Udayavani is now on Telegram. Click here to join our channel and stay updated with the latest news.

Next