Advertisement

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌, ಬಿಜೆಪಿ ನಡುವೆ ಒಳ ಒಪ್ಪಂದ: ಮಾಯಾವತಿ ಆರೋಪ

10:11 AM May 03, 2019 | Sathish malya |

ಲಕ್ನೋ : ಬಿಜೆಪಿ ಮತ್ತು ಕಾಂಗ್ರೆಸ್‌ ವಿರುದ್ಧ ಏಕ ಪ್ರಕಾರದ ವಾಕ್‌ ದಾಳಿಯನ್ನು ಮುಂದುವರಿಸಿರುವ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ, ‘ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಈ ಎರಡೂ ಪಕ್ಷಗಳು ಉತ್ತರ ಪ್ರದೇಶದಲ್ಲಿನ ಎಸ್‌ಪಿ-ಬಿಎಸ್‌ಪಿ-ಆರ್‌ಎಲ್‌ಡಿ ಮೈತ್ರಿಕೂಟದ ವಿರುದ್ಧ ಒಳ ತಿಳಿವಳಿಕೆ ಹೊಂದಿದ್ದು ಆ ನಿಟ್ಟಿನಲ್ಲಿ ಅವು ನಮ್ಮ ಅಭ್ಯರ್ಥಿಗಳನ್ನು ಸೋಲಿಸಲು ಜತೆಗೂಡಿ ಕೆಲಸ ಮಾಡುತ್ತಿವೆ’ ಎಂದು ಆರೋಪಿಸಿದ್ದಾರೆ.

Advertisement

‘ಬಿಜೆಪಿ ಅಭ್ಯರ್ಥಿ ಚುನಾವಣೆ ಗೆಲ್ಲುವ ಬಗ್ಗೆ ಕಾಂಗ್ರೆಸ್‌ಗೆ ಚಿಂತೆ ಇಲ್ಲ; ಆದರೆ ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ಪಕ್ಷಗಳ ಅಂತರ್ಗತ ಧ್ಯೇಯ ಎಸ್‌ಪಿ-ಬಿಎಸ್‌ಪಿ-ಆರ್‌ಎಲ್‌ಡಿ ಅಭ್ಯರ್ಥಿಗಳನ್ನು ಸೋಲಿಸುವುದೇ ಆಗಿದೆ’ ಎಂದು ಮಾಯಾವತಿ ಹೇಳಿದರು.

ಬಾರಾಬಂಕಿಯಲ್ಲಿ ನಡೆದ ಚುನಾವಣಾ ಪ್ರಚಾರ ರಾಲಿಯಲ್ಲಿ ಮಾತನಾಡುತ್ತಿದ್ದ ಮಾಯಾವತಿ, ‘ಬಿಜೆಪಿಯ ಹಾಗೆ ಕಾಂಗ್ರೆಸ್‌ ಕೂಡ ಈಗ ಉತ್ತರ ಪ್ರದೇಶದ ಮೈತ್ರಿಕೂಟದ ವಿರುದ್ಧ ಮಾತನಾಡಲು ತೊಡಗಿದೆ. ಎರಡೂ ಪಕ್ಷಗಳು ನಮ್ಮ ವಿರುದ್ಧ ಒಳ ಒಪ್ಪಂದ ಹೊಂದಿರುವುದು ಮತ್ತು ಅವು ಆ ನಿಟ್ಟಿನಲ್ಲಿ ಜತೆಗೂಡಿ ಕೆಲಸ ಮಾಡುತ್ತಿರುವುದು ಸ್ಪಷ್ಟವಿದೆ ಎಂದು ಹೇಳಿದರು.

ಮತದಾರರು ತಮ್ಮ ಮತವನ್ನು ಕಾಂಗ್ರೆಸ್‌ ಪಕ್ಷಕ್ಕೆ ಹಾಕಿ ಹಾಳು ಮಾಡಬಾರದೆಂದು ಮಾಯಾವತಿ ವಿನಂತಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next