Advertisement

ಅಭಿನಂದನ್‌ಗೆ ಅಭಿನಂದನೆ ಬೇಡಿಕೆ

12:15 AM Mar 27, 2019 | sudhir |

ಉಡುಪಿ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಗಳವಾರ ಶ್ರೀಕೃಷ್ಣ ಮಠಕ್ಕೆ ಭೇಟಿದ್ದು, ಪರ್ಯಾಯ ಶ್ರೀಪಾದರು ವಿಂಗ್‌ ಕಮಾಂಡರ್‌ ಅಭಿನಂದನ್‌ ಅವರನ್ನು ಮಠಕ್ಕೆ ಕರೆಯಿಸಿ ಸಮ್ಮಾನಿಸುವ ಆಶಯ ವ್ಯಕ್ತಪಡಿಸಿದ್ದಾರೆ.

Advertisement

ಬಾಲಾಕೋಟ್‌ ದಾಳಿ ಬಳಿಕ ಪಾಕ್‌ ವಿಮಾನವನ್ನು ಹಿಮ್ಮೆಟ್ಟಿಸಿದ ಭಾರತೀಯ ವಾಯುಪಡೆಯ ವೀರಯೋಧ ವಿಂಗ್‌ ಕಮಾಂಡರ್‌ ಅಭಿನಂದನ್‌ ಪರಾಕ್ರಮ ನಮಗೆ ಬಹಳ ಮೆಚ್ಚುಗೆಯಾಗಿದೆ. ಶ್ರೀಕೃಷ್ಣ ಮಠದಲ್ಲಿ ಅಭಿನಂದನ್‌ ಅವರಿಗೆ ಗೌರವಾರ್ಪಣೆ ಮಾಡಬೇಕು ಎಂಬ ಇಚ್ಛೆ ಇದೆ. ಈ ಕಾರ್ಯ ಕ್ರಮದಲ್ಲಿ ಪಾಲ್ಗೊಳ್ಳಲು ಅವರಿಗೆ ಅವಕಾಶ ಕೊಡಬೇಕು ಎಂದು ಸ್ವಾಮೀಜಿ ಹೇಳಿದರು.

ವಾಯುಪಡೆ ನಿಯಮಗಳು, ಕಾನೂನಾತ್ಮಕ ಅಡೆತಡೆ ಇಲ್ಲದಿದ್ದರೆ

ಕಳುಹಿಸಲಾಗುವುದು. ಈ ಕುರಿತು ರಕ್ಷಣಾ ಇಲಾಖೆಗೆ ಒಂದು ಪತ್ರ ಬರೆಯಿರಿ ಎಂದು ಸಚಿವರು ಸ್ವಾಮೀಜಿಯ ವರಿಗೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next