Advertisement

ಕ್ರೀಡಾಪಟು ಮಂಜುಗೆ ಅಭಿನಂದನೆ

07:56 PM Dec 31, 2021 | Team Udayavani |

ಪಾಂಡವಪುರ: ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ರಾಷ್ಟ್ರಮಟ್ಟದ ಮಾಸ್ಟರ್‌ ಅಥ್ಲೆಟಿಕ್ಸ್‌ ಪಂದ್ಯಾವಳಿಯಲ್ಲಿ ಭಾಗವಹಿಸಿ ಹ್ಯಾಮರ್‌ ಥ್ರೋ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಹಾಗೂ ನಡಿಗೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿ ಕಂಚಿನ ಪದಕ ಪಡೆದು ಅಂತಾರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾದ ತಾಲೂಕಿನ ಎಂ.ಬೆಟ್ಟಹಳ್ಳಿಯ ಎಂ.ಎ.ಮಂಜು ಅವರನ್ನು ತಾಲೂಕಿನ ದಲಿತ ಸೇವಾ ಕ್ರಾಂತಿ ಸಮಿತಿ ಕಾರ್ಯಕರ್ತರು ಪಟ್ಟಣದಲ್ಲಿ ಅಭಿನಂದಿಸಿದರು.

Advertisement

ದಲಿತ ಕ್ರಾಂತಿ ಸೇವಾ ಸಮಿತಿ ಅಧ್ಯಕ್ಷ ಬೊಮ್ಮರಾಜು ಮಾತನಾಡಿ, ತಾಲೂಕಿನ ಎಂ.ಬೆಟ್ಟಹಳ್ಳಿ ಗ್ರಾಮದ ಎಂ.ಎ.ಮಂಜು ಅವರು ತಾಲೂಕಿಗೆ ಕೀರ್ತಿ ತಂದಿದ್ದಾರೆ. ಗ್ರಾಮೀಣ ಪ್ರದೇಶದ ಅಪ್ಪಟ ಕ್ರೀಡಾಪಟುವಾದ ಮಂಜು ಇಂಡೋನೇಷಿಯಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಮಾಸ್ಟರ್‌ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.

ಇನ್ನೂ ಹೆಚ್ಚಿನ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿ ದೇಶಕ್ಕೆ ಕೀರ್ತಿ ತರಬೇಕೆಂದರು. ಸಮಿತಿಯ ಸದಸ್ಯರಾದ ಗುಮ್ಮನಹಳ್ಳಿ ರಮೇಶ್‌, ಅಂತನಹಳ್ಳಿ ಶಿವಸ್ವಾಮಿ, ಕೆಂಪರಾಜು, ಸಿದ್ದಲಿಂಗಮೂರ್ತಿ, ಜಯಕುಮಾರ್‌, ಚಿನ್ನಸ್ವಾಮಿ, ಸ್ವಾಮಿ, ಸತೀಶ್‌, ಮಹಿಳಾ ಘಟಕದ ಅಧ್ಯಕ್ಷೆ ಜಯಲಕ್ಷ್ಮೀ ಸೇರಿದಂತೆ ಹಲವರು ಇದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next