Advertisement

ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಸಂಭ್ರಮ

02:16 PM Sep 04, 2018 | Team Udayavani |

ಹುಮನಾಬಾದ: ಹಳ್ಳಿಖೇಡ(ಬಿ) ಪುರಸಭೆ ಕೈ ಪಾಲದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟಣದಲ್ಲಿ ಸೋಮವಾರ ವಿಜಯೋತ್ಸವ ಆಚರಿಸಿದರು.

Advertisement

ಮತ ಎಣಿಕೆ ನಂತರ ನೇರವಾಗಿ ಸಚಿವ ರಾಜಶೇಖರ ಪಾಟೀಲ ಅವರ ಮನೆಗೆ ತೆರಳಿದ ಕಾರ್ಯಕರ್ತರು ರಾಜಶೇಖರ ಪಾಟೀಲ ಹಾಗೂ ಭೀಮರಾವ್‌ ಪಾಟೀಲ ಅವರನ್ನು ಸನ್ಮಾನಿಸಿದರು. ಇದೇ ವೇಳೆ ಶಾಸಕರು ಕೂಡ ಜಯಗಳಿಸಿದ ಅಭ್ಯರ್ಥಿಗಳನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಪರಸ್ಪರ ಸಿಹಿ ವಿತರಿಸಿ ಸಂಭ್ರಮಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಹರ್ಷವ್ಯಕ್ತಪಡಿಸಿದರು.
 
ಈ ವೇಳೆ ಸಚಿವ ರಾಜಶೇಖರ ಪಾಟೀಲ, ಸಿದ್ದರಾಮಯ್ಯ ಸರ್ಕಾರದ ಅವಧಿ ಯಲ್ಲಿ ಅಂದು ಪೌರಾಡಳಿತ ಸಚಿವರಾಗಿದ್ದ ಈಶ್ವರ ಖಂಡ್ರೆ ಅವರ ಮೇಲೆ ಒತ್ತಡ ಹೇರಿ, ಗ್ರಾಮ ಪಂಚಾಯಿತಿ ಆಗಿದ್ದ ಹಳ್ಳಿಖೇಡ(ಬಿ) ಗ್ರಾಮವನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಿದ್ದೇನೆ. ನೂತನ ಪುರಸಭೆ ಕಟ್ಟಡ ನಿರ್ಮಾಣಕ್ಕಾಗಿ ಈಗಾಗಲೇ 1ಕೋಟಿ ರೂ.ಅನುದಾನ
ಬಿಡುಗಡೆಗೊಳಿಸಿದ್ದು, ಶೀಘ್ರದಲ್ಲೇ ಕಟ್ಟಡ ಕಾಮಗಾರಿ ಆರಂಭಗೊಳ್ಳಲಿದೆ. ಜೊತೆಗೆ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯ ಗಮನಿಸಿ, ಹಳ್ಳಿಖೇಡ(ಬಿ) ಜನ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲಿಸಿದ್ದಾರೆ. ಅಧಿಕಾರ ಅವಧಿ ಇರುವ ವರೆಗೆ ಈ ಭಾಗದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಜನತೆಯ ಋಣ ತೀರಿಸುವುದಾಗಿ ತಿಳಿಸಿದರು.

ಬಿಜೆಪಿ: ಕಾಂಗ್ರೆಸ್‌ ಪಕ್ಷದ ಭದ್ರಕೋಟೆಯಲ್ಲಿ ಕೂಡ ಬಿಜೆಪಿ ಐದು ಸ್ಥಾನಗಳನ್ನು ಪಡೆದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಲಾಯಿತು. ಪಟಾಕಿ ಸಿಡಿಸಿ ಸಿಹಿ ವಿತರಣೆ ಮಾಡಲಾಯಿತು. ಸ್ಥಳಿಯವಾಗಿ ಕಾಂಗ್ರೆಸ್‌ ಆಡಳಿತ ಇರುವ ಮಧ್ಯದಲ್ಲಿ ಕೂಡ ಬಿಜೆಪಿಯವರು ಗೆಲುವು ಕಂಡಿದ್ದು, ಪಕ್ಷದ ಕಾರ್ಯಕರ್ತರಲ್ಲಿ ಹರ್ಷ ಮೂಡಿಸಿದೆ. 

Advertisement

Udayavani is now on Telegram. Click here to join our channel and stay updated with the latest news.

Next